ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm