ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm