ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm