ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm