ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm