ಬ್ರೇಕಿಂಗ್ ನ್ಯೂಸ್
30-12-21 08:57 pm HK Desk news ದೇಶ - ವಿದೇಶ
ಪ್ಯಾರಿಸ್, ಡಿ.30 : ಮಸೀದಿಯೊಂದರ ಇಮಾಮ್ ಜಿಹಾದ್ ಸಮರ್ಥಿಸಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಫ್ರಾನ್ಸ್ ಸರಕಾರ ಅಲ್ಲಿನ ಮಸೀದಿಯನ್ನೇ ಮುಚ್ಚುವಂತೆ ಆದೇಶ ಮಾಡಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಿಂದ 100 ಕಿಮೀ ದೂರದಲ್ಲಿರುವ ಬಿವಾಯ್ಸ್ ಎನ್ನುವ ನಗರದಲ್ಲಿ ಈ ಪ್ರಕರಣ ನಡೆದಿದೆ. ಮಸೀದಿ ಇಮಾಮ್ ತನ್ನ ಭಾಷಣದಲ್ಲಿ ಕ್ರಿಸ್ತಿಯನ್ನರು, ಜೆಹೂದಿಗಳನ್ನು ಗುರಿಯಾಗಿಸಿ ಈ ಹೇಳಿಕೆ ನೀಡಿದ್ದಾನೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫ್ರಾನ್ಸ್ ಸರಕಾರದ ಇಂಟೀರಿಯರ್ ಮಿನಿಸ್ಟರ್ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಮಾಹಿತಿ ಪ್ರಕಾರ, ಪ್ರಚೋದನಕಾರಿ ಭಾಷಣ ಮಾಡಿರುವ ಇಮಾಮ್ ಇತ್ತೀಚೆಗಷ್ಟೇ ಮತಾಂತರಗೊಂಡಿದ್ದ ವ್ಯಕ್ತಿ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಮಸೀದಿ ಕಮಿಟಿಯವರು ಆ ವ್ಯಕ್ತಿಯನ್ನು ಇಮಾಮ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ.
ಇತ್ತೀಚೆಗಷ್ಟೇ ಫ್ರಾನ್ಸ್ ಸರಕಾರ, ದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದ ವಿಚಾರಗಳನ್ನು ಬಿತ್ತುವ ಪ್ರಾರ್ಥನಾ ಕೇಂದ್ರಗಳ ಬಗ್ಗೆ ನಿಗಾ ಇಡುವುದಾಗಿ ಹೇಳಿತ್ತು. 2020ರ ಅಕ್ಟೋಬರ್ ನಲ್ಲಿ ಸಾಮುವೆಲ್ ಪ್ಯಾಟಿ ಎನ್ನುವ ಶಿಕ್ಷಕನೊಬ್ಬ ಕೊಲೆಯಾದ ಬಳಿಕ ಫ್ರಾನ್ಸ್ ಸರಕಾರ ಜಾಗೃತ ಆಗಿತ್ತು. ಸಾಮುವೆಲ್ ಪ್ಯಾಟಿ, ಕೊಲೆಯಾಗುವುದಕ್ಕೂ ಮುನ್ನ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತ ವಿವಾದಿತ ಕಾರ್ಟೂನ್ ಗಳನ್ನು ಪ್ರಚಾರಪಡಿಸಿದ್ದ. ಇದಕ್ಕಾಗಿ ಪ್ಯಾಟಿಯನ್ನು ಟಾರ್ಗೆಟ್ ಮಾಡಿದ್ದ ಗುಂಪೊಂದು ಆನ್ಲೈನಲ್ಲಿ ಅಭಿಯಾನವನ್ನೂ ನಡೆಸಿತ್ತು.
ಆಂತರಿಕ ಸಚಿವಾಲಯದ ಮಾಹಿತಿ ಪ್ರಕಾರ ಡಿಸೆಂಬರ್ ತಿಂಗಳಲ್ಲಿ 100 ಮಸೀದಿಗಳನ್ನು ನಿಗಾ ಇಟ್ಟು ಕಾರ್ಯಾಚರಣೆ ನಡೆಸಲಾಗಿದೆ. ಅಲ್ಲದೆ, ಇತ್ತೀಚಿನ ಕೆಲವು ತಿಂಗಳಲ್ಲಿ ಫ್ರಾನ್ಸ್ ದೇಶದ 2600ಕ್ಕೂ ಹೆಚ್ಚು ಪ್ರಾರ್ಥನಾ ಕೇಂದ್ರಗಳಲ್ಲಿ ತನಿಖೆ ನಡೆಸಲಾಗಿದೆ. ದೇಶದ ಕಾನೂನಿಗೆ ವಿರುದ್ಧವಾಗಿ ಇಸ್ಲಾಮಿಕ್ ಪ್ರತ್ಯೇಕತವಾದ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖಾ ಏಜನ್ಸಿಗಳು ತನಿಖೆ ಆರಂಭಿಸಿವೆ.
France closes mosque after unacceptable preaching.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am