ಬ್ರೇಕಿಂಗ್ ನ್ಯೂಸ್
31-12-21 11:18 am HK Desk news ದೇಶ - ವಿದೇಶ
ಮುಂಬೈ, ಡಿ 31: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ ಮುಂಬೈ ಪೊಲೀಸರೇ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಕೇಂದ್ರ ಗುಪ್ತಚರ ಇಲಾಖೆ ಈ ಮಾಹಿತಿಯನ್ನು ಪಡೆದುಕೊಂಡಿದ್ದು, ಹೊಸ ವರ್ಷದ ಸಂಭ್ರಮವನ್ನು ಹಾಳು ಮಾಡುವ ನಿಟ್ಟಿನಲ್ಲಿ ಖಲಿಸ್ತಾನಿ ಭಯೋತ್ಪಾದಕರು ಈ ಬಾರಿ ಪ್ರಯತ್ನ ಪಡಲಿದ್ದಾರೆ. ಅದರೊಂದಿಗೆ ಶಂಕಿತನ ಕುರಿತಾಗಿ ಮಾಹಿತಿಯನ್ನೂ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿರುವ ಕಾರಣ, ಇಡೀ ಮುಂಬೈಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ಜರ್ಮನಿಯಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ವೇಳೆ ಆತ ಮುಂಬೈ ಮತ್ತು ಇತರ ದೊಡ್ಡ ನಗರಗಳಲ್ಲಿ ಯೋಜಿಸಲಾಗಿರುವ ದಾಳಿ ಕುರಿತು ಮಾಹಿತಿ ನೀಡಿದ್ದಾನೆಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
"SJF ಹೊರತುಪಡಿಸಿ, ಇತರ ನಿಷೇಧಿತ ಖಲಿಸ್ತಾನ್ ಪರ ಗುಂಪುಗಳು ಮುಂಬೈ, ದೆಹಲಿ ಮತ್ತು ಇತರ ನಗರಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ನೊಂದಿಗೆ ಸಂಪರ್ಕದಲ್ಲಿವೆ ಎಂಬುದರ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೂ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Security has been upped in Mumbai following an Intelligence Bureau report suggesting a possible terror strike by Khalistan terrorists. Security is high at railways stations and other public places after the report was issued.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm