ಬ್ರೇಕಿಂಗ್ ನ್ಯೂಸ್
31-12-21 11:18 am HK Desk news ದೇಶ - ವಿದೇಶ
ಮುಂಬೈ, ಡಿ 31: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ ಮುಂಬೈ ಪೊಲೀಸರೇ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಕೇಂದ್ರ ಗುಪ್ತಚರ ಇಲಾಖೆ ಈ ಮಾಹಿತಿಯನ್ನು ಪಡೆದುಕೊಂಡಿದ್ದು, ಹೊಸ ವರ್ಷದ ಸಂಭ್ರಮವನ್ನು ಹಾಳು ಮಾಡುವ ನಿಟ್ಟಿನಲ್ಲಿ ಖಲಿಸ್ತಾನಿ ಭಯೋತ್ಪಾದಕರು ಈ ಬಾರಿ ಪ್ರಯತ್ನ ಪಡಲಿದ್ದಾರೆ. ಅದರೊಂದಿಗೆ ಶಂಕಿತನ ಕುರಿತಾಗಿ ಮಾಹಿತಿಯನ್ನೂ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿರುವ ಕಾರಣ, ಇಡೀ ಮುಂಬೈಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ಜರ್ಮನಿಯಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ವೇಳೆ ಆತ ಮುಂಬೈ ಮತ್ತು ಇತರ ದೊಡ್ಡ ನಗರಗಳಲ್ಲಿ ಯೋಜಿಸಲಾಗಿರುವ ದಾಳಿ ಕುರಿತು ಮಾಹಿತಿ ನೀಡಿದ್ದಾನೆಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
"SJF ಹೊರತುಪಡಿಸಿ, ಇತರ ನಿಷೇಧಿತ ಖಲಿಸ್ತಾನ್ ಪರ ಗುಂಪುಗಳು ಮುಂಬೈ, ದೆಹಲಿ ಮತ್ತು ಇತರ ನಗರಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ನೊಂದಿಗೆ ಸಂಪರ್ಕದಲ್ಲಿವೆ ಎಂಬುದರ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೂ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Security has been upped in Mumbai following an Intelligence Bureau report suggesting a possible terror strike by Khalistan terrorists. Security is high at railways stations and other public places after the report was issued.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm