ಬ್ರೇಕಿಂಗ್ ನ್ಯೂಸ್
31-12-21 11:58 am HK Desk news ದೇಶ - ವಿದೇಶ
ಮುಂಬೈ, ಡಿ 31: ಭಾರತದಲ್ಲಿ ಮೊದಲ ಓಮಿಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ದಲ್ಲಿ ನಡೆದಿದೆ.
ಓಮಿಕ್ರಾನ್ ಸೋಂಕು ತಗುಲಿದ ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಓಮಿಕ್ರಾನ್ ಸೋಂಕು ಕಾರಣ ಎಂದು ಪರಿಗಣಿಸದಂತೆ ಹೇಳಲಾಗುತ್ತಿದೆ. ಇದರ ಹೊರತಾಗಿ ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳಲ್ಲೇ 198 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 5,368 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪೈಕಿ ಸೋಂಕಿತರ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆೊಳಪಡಿಸಿದ ಸಂದರ್ಭದಲ್ಲಿ 198 ಸೋಂಕಿತರಲ್ಲಿ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಅತಿಹೆಚ್ಚು ಹರಡುವಿಕೆ ವೇಗವನ್ನು ಹೊಂದಿದೆ ಎಂಬ ತಜ್ಞರ ಎಚ್ಚರಿಕೆ ಸತ್ಯವಾಗುತ್ತಿದೆ. ರಾಜ್ಯದಲ್ಲಿ ಬುಧವಾರಕ್ಕಿಂತ ಗುರುವಾರ ಪತ್ತೆಯಾದ ಸೋಂಕಿತ ಪ್ರಕರಣಗಳಲ್ಲಿ ಶೇ.37ರಷ್ಟು ಏರಿಕೆಯಾಗಿದೆ.
ಮುಂಬೈನಲ್ಲಿ ಐದು ಪಟ್ಟು ಕೊವಿಡ್-19 ಪ್ರಕರಣಗಳ ಹೆಚ್ಚಳ;
ವಾಣಿಜ್ಯನಗರಿ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ವಾರದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಶುಕ್ರವಾರ ನಗರದಲ್ಲಿ 683 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು, ಆದರೆ ಈ ಶುಕ್ರವಾರವೊಂದೇ ದಿನದಲ್ಲಿ 3,671 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಒಂದೇ ವಾರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಐದು ಪಟ್ಟು ಹೆಚ್ಚಳವಾಗಿದೆ.
India has recorded its 'first Omicron death' after a 52-year-old man who had tested positive for the new variant of coronavirus died of a cardiac arrest in the Pimpri district of Maharashtra. The state, however, has attributed the demise to his underlying medical situation and chose not to declare it the first casualty of the variant.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm