ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm