ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am