ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm