ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm