ಬ್ರೇಕಿಂಗ್ ನ್ಯೂಸ್
02-01-22 05:46 pm HK Desk news ದೇಶ - ವಿದೇಶ
ನವದೆಹಲಿ, ಜ.2 : ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿಯ ದುರಂತ ಸಾವಿಗ ಕಾರಣವಾದ ಹೆಲಿಕಾಪ್ಟರ್ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ಹಲವು ರೀತಿಯ ಶಂಕೆ ಕೇಳಿಬಂದಿದ್ದವು. ಘಟನೆ ಬಗ್ಗೆ ತನಿಖೆ ನಡೆಸಿದ ತನಿಖಾಧಿಕಾರಿಗಳ ತಂಡ, ಅವಘಡಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಅನ್ನುವ ನಿರ್ಧಾರಕ್ಕೆ ಬಂದಿದೆ. ತಜ್ಞರ ತಂಡ ತನಿಖೆಯನ್ನು ಪೂರ್ತಿಗೊಳಿಸಿದ್ದು ಕೆಲವೇ ದಿನಗಳಲ್ಲಿ ಸರಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ.
ಡಿ.8ರಂದು ಮಧ್ಯಾಹ್ನ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ವಾಯುಪಡೆಗೆ ಸೇರಿದ ಅತ್ಯಾಧುನಿಕ ಹೆಲಿಕಾಪ್ಟರ್ ಅವಘಡಕ್ಕೆ ತುತ್ತಾಗಿತ್ತು. ಕಾಪ್ಟರ್ ನಲ್ಲಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮತ್ತವರ ಪತ್ನಿ ಪ್ರಯಾಣಿಸುತ್ತಿದ್ದರು. ಸಿಬಂದಿ ಸೇರಿದಂತೆ ಕಾಪ್ಟರ್ ನಲ್ಲಿದ್ದ 13 ಮಂದಿ ಯೋಧರು ಕಾಡಿನ ಮಧ್ಯೆ ದುರಂತಕ್ಕೀಡಾಗಿ ಸಜೀವ ದಹನವಾಗಿದ್ದರು. ಘಟನೆಯಲ್ಲಿ 90 ಶೇಕಡಾ ಸುಟ್ಟ ಗಾಯಗಳೊಂದಿಗೆ ಬದುಕಿ ಉಳಿದಿದ್ದ ಕ್ಯಾಪ್ಟನ್ ಅರುಣ್ ಸಿಂಗ್ ವಾರ ಕಾಲ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊನೆಗೆ ಸಾವನ್ನಪ್ಪಿದ್ದರು.
ಘಟನೆ ಬಗ್ಗೆ ಕಾರಣವೇನು, ಹವಾಮಾನ ವೈಪರೀತ್ಯ ಇದ್ದಾಗ ಸೇನಾ ಪಡೆಗಳ ಮುಖ್ಯಸ್ಥರಿದ್ದ ಕಾಪ್ಟರ್ ತೆರಳಿದ್ದು ಹೇಗೆ, ಈ ಬಗ್ಗೆ ಮೊದಲೇ ಸೇನಾಧಿಕಾರಿಗಳು ನಿಗಾ ವಹಿಸಿಲ್ಲ ಏಕೆ ಎಂಬ ಬಗ್ಗೆ ನಾನಾ ರೀತಿಯ ಪ್ರಶ್ನೆಗಳು ಕೇಳಿಬಂದಿದ್ದವು. ಈ ಬಗ್ಗೆ ಭಾರತೀಯ ವಾಯುಪಡೆ ಮತ್ತು ಇನ್ನಿತರ ಉನ್ನತ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ತನಿಖೆಗೆ ನೇಮಕ ಮಾಡಲಾಗಿತ್ತು. ಪೈಲಟ್ ದೋಷದಿಂದ ಅವಘಡ ಸಂಭವಿಸಿತ್ತೇ, ಇತರೇ ತಾಂತ್ರಿಕ ದೋಷದಿಂದಾಗಿ ದುರಂತ ಆಗಿತ್ತೇ ಎನ್ನುವ ಪ್ರಶ್ನೆಗಳಿಗೆ ಸೇನಾಧಿಕಾರಿಗಳಾಗಲೀ, ಸರಕಾರವಾಗಲೀ ಉತ್ತರ ನೀಡಿರಲಿಲ್ಲ.
ಕಳಪೆ ವಾತಾವರಣ, ಹವಾಮಾನ ವೈಪರೀತ್ಯದಿಂದಾಗಿ ಸ್ಪಷ್ಟವಾಗಿ ಗೋಚರಿಸದೇ ಕಾಡಿನ ಮಧ್ಯಕ್ಕೆ ಹೆಲಿಕಾಪ್ಟರ್ ನುಗ್ಗಿತ್ತು ಅನ್ನುವ ವರದಿಯನ್ನು ಸಿದ್ಧಪಡಿಸಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಕೆಲವು ದಿನಗಳಲ್ಲಿ ವಾಯುಪಡೆ ಮುಖ್ಯಸ್ಥ ವಿ.ಆರ್.ಚೌಧರಿಗೆ ವರದಿ ಸಲ್ಲಿಕೆಯಾಗಲಿದೆ.
an army helicopter carrying 14 people, including chief of staff vipin rawat, crashed in kunnur last 8 to attend an event at the army college. thirteen people, including bipin rawat and his wife, died in the accident.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm