ಬ್ರೇಕಿಂಗ್ ನ್ಯೂಸ್
02-01-22 05:46 pm HK Desk news ದೇಶ - ವಿದೇಶ
ನವದೆಹಲಿ, ಜ.2 : ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿಯ ದುರಂತ ಸಾವಿಗ ಕಾರಣವಾದ ಹೆಲಿಕಾಪ್ಟರ್ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ಹಲವು ರೀತಿಯ ಶಂಕೆ ಕೇಳಿಬಂದಿದ್ದವು. ಘಟನೆ ಬಗ್ಗೆ ತನಿಖೆ ನಡೆಸಿದ ತನಿಖಾಧಿಕಾರಿಗಳ ತಂಡ, ಅವಘಡಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಅನ್ನುವ ನಿರ್ಧಾರಕ್ಕೆ ಬಂದಿದೆ. ತಜ್ಞರ ತಂಡ ತನಿಖೆಯನ್ನು ಪೂರ್ತಿಗೊಳಿಸಿದ್ದು ಕೆಲವೇ ದಿನಗಳಲ್ಲಿ ಸರಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ.
ಡಿ.8ರಂದು ಮಧ್ಯಾಹ್ನ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ವಾಯುಪಡೆಗೆ ಸೇರಿದ ಅತ್ಯಾಧುನಿಕ ಹೆಲಿಕಾಪ್ಟರ್ ಅವಘಡಕ್ಕೆ ತುತ್ತಾಗಿತ್ತು. ಕಾಪ್ಟರ್ ನಲ್ಲಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮತ್ತವರ ಪತ್ನಿ ಪ್ರಯಾಣಿಸುತ್ತಿದ್ದರು. ಸಿಬಂದಿ ಸೇರಿದಂತೆ ಕಾಪ್ಟರ್ ನಲ್ಲಿದ್ದ 13 ಮಂದಿ ಯೋಧರು ಕಾಡಿನ ಮಧ್ಯೆ ದುರಂತಕ್ಕೀಡಾಗಿ ಸಜೀವ ದಹನವಾಗಿದ್ದರು. ಘಟನೆಯಲ್ಲಿ 90 ಶೇಕಡಾ ಸುಟ್ಟ ಗಾಯಗಳೊಂದಿಗೆ ಬದುಕಿ ಉಳಿದಿದ್ದ ಕ್ಯಾಪ್ಟನ್ ಅರುಣ್ ಸಿಂಗ್ ವಾರ ಕಾಲ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊನೆಗೆ ಸಾವನ್ನಪ್ಪಿದ್ದರು.
ಘಟನೆ ಬಗ್ಗೆ ಕಾರಣವೇನು, ಹವಾಮಾನ ವೈಪರೀತ್ಯ ಇದ್ದಾಗ ಸೇನಾ ಪಡೆಗಳ ಮುಖ್ಯಸ್ಥರಿದ್ದ ಕಾಪ್ಟರ್ ತೆರಳಿದ್ದು ಹೇಗೆ, ಈ ಬಗ್ಗೆ ಮೊದಲೇ ಸೇನಾಧಿಕಾರಿಗಳು ನಿಗಾ ವಹಿಸಿಲ್ಲ ಏಕೆ ಎಂಬ ಬಗ್ಗೆ ನಾನಾ ರೀತಿಯ ಪ್ರಶ್ನೆಗಳು ಕೇಳಿಬಂದಿದ್ದವು. ಈ ಬಗ್ಗೆ ಭಾರತೀಯ ವಾಯುಪಡೆ ಮತ್ತು ಇನ್ನಿತರ ಉನ್ನತ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ತನಿಖೆಗೆ ನೇಮಕ ಮಾಡಲಾಗಿತ್ತು. ಪೈಲಟ್ ದೋಷದಿಂದ ಅವಘಡ ಸಂಭವಿಸಿತ್ತೇ, ಇತರೇ ತಾಂತ್ರಿಕ ದೋಷದಿಂದಾಗಿ ದುರಂತ ಆಗಿತ್ತೇ ಎನ್ನುವ ಪ್ರಶ್ನೆಗಳಿಗೆ ಸೇನಾಧಿಕಾರಿಗಳಾಗಲೀ, ಸರಕಾರವಾಗಲೀ ಉತ್ತರ ನೀಡಿರಲಿಲ್ಲ.
ಕಳಪೆ ವಾತಾವರಣ, ಹವಾಮಾನ ವೈಪರೀತ್ಯದಿಂದಾಗಿ ಸ್ಪಷ್ಟವಾಗಿ ಗೋಚರಿಸದೇ ಕಾಡಿನ ಮಧ್ಯಕ್ಕೆ ಹೆಲಿಕಾಪ್ಟರ್ ನುಗ್ಗಿತ್ತು ಅನ್ನುವ ವರದಿಯನ್ನು ಸಿದ್ಧಪಡಿಸಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಕೆಲವು ದಿನಗಳಲ್ಲಿ ವಾಯುಪಡೆ ಮುಖ್ಯಸ್ಥ ವಿ.ಆರ್.ಚೌಧರಿಗೆ ವರದಿ ಸಲ್ಲಿಕೆಯಾಗಲಿದೆ.
an army helicopter carrying 14 people, including chief of staff vipin rawat, crashed in kunnur last 8 to attend an event at the army college. thirteen people, including bipin rawat and his wife, died in the accident.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am