ಬ್ರೇಕಿಂಗ್ ನ್ಯೂಸ್
04-01-22 02:36 pm HK Desk news ದೇಶ - ವಿದೇಶ
ಲಕ್ನೋ, ಜ.4 : ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ತಿರುಗೇಟು ನೀಡುವ ಭರದಲ್ಲಿ ಮಥುರೆಯ ಕೃಷ್ಣ ತನಗೂ ಕನಸಿನಲ್ಲಿ ಬಂದಿದ್ದಾಗಿ ಹೇಳಿಕೆ ನೀಡಿದ್ದಾರೆ. ನನಗೆ ದಿನವೂ ರಾತ್ರಿ ನಿದ್ದೆಯಲ್ಲಿ ಶ್ರೀಕೃಷ್ಣ ಕನಸಿನಲ್ಲಿ ಬರುತ್ತಿದ್ದು, ಮುಂದಿನ ಬಾರಿ ಸಮಾಜವಾದಿ ಪಾರ್ಟಿಯೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.
ಬಿಜೆಪಿಯ ರಾಜ್ಯಸಭಾ ಸದಸ್ಯ ಹರಿನಾಥ್ ಸಿಂಗ್, ಪಾರ್ಟಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿ ಅಖಿಲೇಶ್ ಈ ಮಾತು ಹೇಳಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಈ ಬಾರಿ ಮಥುರಾದಿಂದ ಚುನಾವಣೆಗೆ ನಿಲ್ಲಿಸಬೇಕು. ಈ ಬಗ್ಗೆ ಮಥುರೆಯ ಶ್ರೀಕೃಷ್ಣನೇ ತನಗೆ ಕನಸಿನಲ್ಲಿ ಬಂದು ಹೇಳಿದ್ದಾನೆ. ಮಥುರೆಯಲ್ಲಿ ಯೋಗಿ ಆದಿತ್ಯನಾಥ್ ಗೆದ್ದು ಬರಲಿದ್ದಾರೆ ಎಂದು ಹರಿನಾಥ್ ಸಿಂಗ್, ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ಈಗಾಗಲೇ ಯೋಗಿ ಆದಿತ್ಯನಾಥ್, ಪಕ್ಷ ಹೇಳಿದರೆ ಉತ್ತರ ಪ್ರದೇಶದ ಯಾವ ಕ್ಷೇತ್ರದಲ್ಲೂ ಚುನಾವಣೆಗೆ ನಿಲ್ಲಲು ನಾನು ತಯಾರಿದ್ದೇನೆ ಎಂಬುದಾಗಿ ಹೇಳಿಕೆ ನೀಡಿದ್ದರು.

ಹೀಗಾಗಿ ಯೋಗಿ ಅವರನ್ನು ತಮ್ಮಲ್ಲಿ ನಿಲ್ಲಿಸಿ ಗೆಲ್ಲಿಸಬೇಕೆಂದು ವಿವಿಧ ಕ್ಷೇತ್ರಗಳ ಬಿಜೆಪಿ ನಾಯಕರು ಅಹವಾಲು ಮುಂದಿಡುತ್ತಿದ್ದಾರೆ. ಈ ಪತ್ರವನ್ನು ಉಲ್ಲೇಖಿಸಿದ ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್, ಬಾಬಾಜೀ (ಯೋಗಿ ಆದಿತ್ಯನಾಥ್) ಎಲ್ಲದರಲ್ಲಿ ಸೋಲು ಕಂಡಿದ್ದಾರೆ. ಅವರನ್ನು ಯಾರು ಕೂಡ ರಕ್ಷಣೆ ಮಾಡಲು ಸಾಧ್ಯವಿಲ್ಲ. ಕೃಷ್ಣ ದೇವರು ನನಗೂ ಕನಸಿನಲ್ಲಿ ಬರುತ್ತಿದ್ದು ದಿನವೂ ಸಮಾಜವಾದಿ ಪಾರ್ಟಿಯೇ ಅಧಿಕಾರಕ್ಕೆ ಬರುವ ಬಗ್ಗೆ ಭವಿಷ್ಯ ಹೇಳುತ್ತಿದ್ದಾನೆ ಎಂದು ಕಟಕಿಯಾಡಿದ್ದಾರೆ.
ಅಖಿಲೇಶ್ ಯಾದವ್, 2019ರ ಚುನಾವಣೆಯಲ್ಲಿ ಅಜಂಗಢ ಲೋಕಸಭಾ ಕ್ಷೇತ್ರದಲ್ಲಿ ನಿಂತು ಸಂಸದರಾಗಿದ್ದರು. ಈಗ ಬಿಜೆಪಿ ವಿರುದ್ಧ ಹರಿಹಾಯುತ್ತಾ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಕಸರತ್ತು ಮಾಡುತ್ತಿದ್ದಾರೆ.
UP election 2022: Referring to a letter written by BJP Rajya Sabha MP Harnath Singh, SP chief Akhilesh said that Lord Krishna came in his dreams to tell him that SP is going to form the government in Uttar Pradesh.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm