ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm