ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm