ಬ್ರೇಕಿಂಗ್ ನ್ಯೂಸ್
09-01-22 10:25 pm HK Desk news ದೇಶ - ವಿದೇಶ
ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ಸುದೀರ್ಘ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಸೃಷ್ಟಿಸಿದ್ದಾರೆ.
ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.
ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್, ಸುರೇಶ್, ಸೈನನ್ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.
ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Joseph (58), a fisherman from Tamil Nadu, who fell into the sea while fishing, reached the shore after swimming for 30 hours in the sea.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm