ಬ್ರೇಕಿಂಗ್ ನ್ಯೂಸ್
10-01-22 06:06 pm HK Desk news ದೇಶ - ವಿದೇಶ
ನ್ಯೂಯಾರ್ಕ್, ಜ.10 : ಅಪಾರ್ಟ್ಮೆಂಟ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಒಂಬತ್ತು ಮಕ್ಕಳು ಸೇರಿದಂತೆ 19 ಮಂದಿ ಸಜೀವ ದಹನವಾದ ಘಟನೆ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ.
60ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಈ ಪೈಕಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ ಬಹುತೇಕರು ತೀವ್ರ ಹೊಗೆಯಿಂದ ಉಸಿರುಗಟ್ಟಿ ಜೀವ ಕಳೆದುಕೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಈಸ್ಟ್ ನ್ಯೂಯಾರ್ಕ್ ನಗರದ 181ನೇ ಬೀದಿಯಲ್ಲಿ 19 ಮಹಡಿ ಹೊಂದಿದ್ದ ಬ್ರಾನೆಕ್ಸ್ ಟ್ವಿನ್ ಪಾರ್ಕ್ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿದ್ದು ಶಮನಗೊಳಿಸಲು 200ಕ್ಕೂ ಹೆಚ್ಚು ಮಂದಿ ಅಗ್ನಿಶಾಮಕ ಸಿಬ್ಬಂದಿ ಶ್ರಮಿಸಿದ್ದಾಗಿ ಎಫ್ ಡಿಎನ್ವೈ ವಿವರಿಸಿದೆ. ಪ್ರತಿ ಮಹಡಿಯಲ್ಲೂ ಜನ ಉಸಿರುಕಟ್ಟಿ ಬಿದ್ದಿರುವುದನ್ನು ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕೆಲವರು ಹೃದಯ ಸ್ತಂಭನದಿಂದ ಸಾವು ಕಂಡಿದ್ದರು.
1990ರಲ್ಲಿ ಹ್ಯಾಪಿ ಲ್ಯಾಂಡ್ ಸೋಶಿಯಲ್ ಕ್ಲಬ್ನಲ್ಲಿ 87 ಮಂದಿಯನ್ನು ಬಲಿ ಪಡೆದ ಭೀಕರ ದುರಂತದ ತೀವ್ರತೆಗೆ ಈ ಘಟನೆಯನ್ನು ಹೋಲಿಸಲಾಗಿದೆ. ಮಾಜಿ ಪ್ರೇಯಸಿಯ ಜತೆ ವಾಗ್ವಾದಕ್ಕೆ ಇಳಿದ ವ್ಯಕ್ತಿಯೊಬ್ಬ ಕಟ್ಟಡಕ್ಕೆ ಬೆಂಕಿ ಹಚ್ಚಿ ಆ ದುರಂತ ಸಂಭವಿಸಿತ್ತು.
ಭಾನುವಾರ ಸಂಭವಿಸಿದ ಅಗ್ನಿದುರಂತ ಎರಡು ಮತ್ತು ಮೂರನೇ ಮಹಡಿಯ ಡ್ಯೂಪ್ಲೆಕ್ಸ್ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಕಾಣಿಸಿಕೊಳ್ಳುವ ಮೂಲಕ ಹರಡಿತ್ತು. ಅಪಾರ್ಟ್ಮೆಂಟ್ ಬಾಗಿಲು ತೆರೆದಿರುವುದು ಅಗ್ನಿಶಾಮಕ ಸಿಬ್ಬಂದಿಗೆ ಕಂಡುಬಂದಿದ್ದು, ಇದು ಬೆಂಕಿ ಹಾಗೂ ಹೊಗೆ ಮೇಲ್ಮುಖವಾಗಿ ಹರಡಲು ಕಾರಣವಾಯಿತು ಎಂದು ವಿವರಿಸಿದ್ದಾರೆ. ಕೆಲವು ದಿನಗಳ ಹಿಂದೆ ಎಂಟು ಮಕ್ಕಳು ಸೇರಿದಂತೆ 12 ಮಂದಿ ಫಿಲಿಡೆಲ್ಫಿಯಾದ ಮನೆಯೊಂದರಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಮೃತಪಟ್ಟಿದ್ದರು.
At least 19 people, including nine children, have died after a fire in a New York apartment building. Another 32 people were sent to hospital, several of whom are in a critical condition, according to New York Mayor Eric Adams.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm