ಬ್ರೇಕಿಂಗ್ ನ್ಯೂಸ್
10-01-22 06:06 pm HK Desk news ದೇಶ - ವಿದೇಶ
ನ್ಯೂಯಾರ್ಕ್, ಜ.10 : ಅಪಾರ್ಟ್ಮೆಂಟ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಒಂಬತ್ತು ಮಕ್ಕಳು ಸೇರಿದಂತೆ 19 ಮಂದಿ ಸಜೀವ ದಹನವಾದ ಘಟನೆ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ.
60ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಈ ಪೈಕಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ ಬಹುತೇಕರು ತೀವ್ರ ಹೊಗೆಯಿಂದ ಉಸಿರುಗಟ್ಟಿ ಜೀವ ಕಳೆದುಕೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಈಸ್ಟ್ ನ್ಯೂಯಾರ್ಕ್ ನಗರದ 181ನೇ ಬೀದಿಯಲ್ಲಿ 19 ಮಹಡಿ ಹೊಂದಿದ್ದ ಬ್ರಾನೆಕ್ಸ್ ಟ್ವಿನ್ ಪಾರ್ಕ್ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿದ್ದು ಶಮನಗೊಳಿಸಲು 200ಕ್ಕೂ ಹೆಚ್ಚು ಮಂದಿ ಅಗ್ನಿಶಾಮಕ ಸಿಬ್ಬಂದಿ ಶ್ರಮಿಸಿದ್ದಾಗಿ ಎಫ್ ಡಿಎನ್ವೈ ವಿವರಿಸಿದೆ. ಪ್ರತಿ ಮಹಡಿಯಲ್ಲೂ ಜನ ಉಸಿರುಕಟ್ಟಿ ಬಿದ್ದಿರುವುದನ್ನು ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕೆಲವರು ಹೃದಯ ಸ್ತಂಭನದಿಂದ ಸಾವು ಕಂಡಿದ್ದರು.
1990ರಲ್ಲಿ ಹ್ಯಾಪಿ ಲ್ಯಾಂಡ್ ಸೋಶಿಯಲ್ ಕ್ಲಬ್ನಲ್ಲಿ 87 ಮಂದಿಯನ್ನು ಬಲಿ ಪಡೆದ ಭೀಕರ ದುರಂತದ ತೀವ್ರತೆಗೆ ಈ ಘಟನೆಯನ್ನು ಹೋಲಿಸಲಾಗಿದೆ. ಮಾಜಿ ಪ್ರೇಯಸಿಯ ಜತೆ ವಾಗ್ವಾದಕ್ಕೆ ಇಳಿದ ವ್ಯಕ್ತಿಯೊಬ್ಬ ಕಟ್ಟಡಕ್ಕೆ ಬೆಂಕಿ ಹಚ್ಚಿ ಆ ದುರಂತ ಸಂಭವಿಸಿತ್ತು.
ಭಾನುವಾರ ಸಂಭವಿಸಿದ ಅಗ್ನಿದುರಂತ ಎರಡು ಮತ್ತು ಮೂರನೇ ಮಹಡಿಯ ಡ್ಯೂಪ್ಲೆಕ್ಸ್ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಕಾಣಿಸಿಕೊಳ್ಳುವ ಮೂಲಕ ಹರಡಿತ್ತು. ಅಪಾರ್ಟ್ಮೆಂಟ್ ಬಾಗಿಲು ತೆರೆದಿರುವುದು ಅಗ್ನಿಶಾಮಕ ಸಿಬ್ಬಂದಿಗೆ ಕಂಡುಬಂದಿದ್ದು, ಇದು ಬೆಂಕಿ ಹಾಗೂ ಹೊಗೆ ಮೇಲ್ಮುಖವಾಗಿ ಹರಡಲು ಕಾರಣವಾಯಿತು ಎಂದು ವಿವರಿಸಿದ್ದಾರೆ. ಕೆಲವು ದಿನಗಳ ಹಿಂದೆ ಎಂಟು ಮಕ್ಕಳು ಸೇರಿದಂತೆ 12 ಮಂದಿ ಫಿಲಿಡೆಲ್ಫಿಯಾದ ಮನೆಯೊಂದರಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಮೃತಪಟ್ಟಿದ್ದರು.
At least 19 people, including nine children, have died after a fire in a New York apartment building. Another 32 people were sent to hospital, several of whom are in a critical condition, according to New York Mayor Eric Adams.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm