ಬ್ರೇಕಿಂಗ್ ನ್ಯೂಸ್
10-01-22 10:50 pm HK Desk news ದೇಶ - ವಿದೇಶ
ನವದೆಹಲಿ, ಜ.10 : ಪ್ರಧಾನಿ ಮೋದಿ ತೆರಳುತ್ತಿದ್ದ ಎಸ್ ಪಿಜಿ ಭದ್ರತೆಯ ಕಾರನ್ನು ಬ್ಲಾಕ್ ಮಾಡಿ, ಭದ್ರತಾ ಲೋಪಕ್ಕೆ ಕಾರಣವಾದ ಘಟನೆಗೆ ತಾವೇ ಹೊಣೆಯೆಂದು ಖಲೀಸ್ತಾನಿ ಉಗ್ರರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ವಕೀಲರೊಬ್ಬರಿಗೆ ಬೆದರಿಕೆ ಕರೆಯ ವಾಯ್ಸ್ ಮೆಸೇಜ್ ಬಂದಿದ್ದು, ಆ ಘಟನೆಯನ್ನು ನಾವೇ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಈ ಮೆಸೇಜನ್ನು ಬ್ರಿಟನ್ ದೇಶದಿಂದ ಕಳುಹಿಸಲಾಗಿತ್ತು ಅನ್ನೋದನ್ನು ಪತ್ತೆ ಮಾಡಲಾಗಿದೆ.
ಈ ಬಗ್ಗೆ ಬೆದರಿಕೆ ಕರೆ ಸ್ವೀಕರಿಸಿರುವ ವಕೀಲ ನಿಶಾಂತ್ ಕಾಂತೇಶ್ವರ್, ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸದಂತೆ ಬೆದರಿಕೆ ಒಡ್ಡಿದ್ದಾರೆ. ಈ ಕರೆಯನ್ನು ಸಿಖ್ ಫಾರ್ ಜಸ್ಟಿಸ್ ಸಂಘಟನೆಯಿಂದ ಬ್ರಿಟನ್ ದೇಶದಿಂದ ಮಾಡಿದ್ದಾಗಿ ತಿಳಿಸಿದ್ದಾರೆ ಎಂದು ಟೈಮ್ಸ್ ನೌ ವಾಹಿನಿಗೆ ಹೇಳಿದ್ದಾರೆ.

ಸುಪ್ರೀಂ ಕೋರ್ಟಿನ ಇನ್ನೊಬ್ಬ ವಕೀಲ ವಿಷ್ಣು ಜೈನ್ ಅವರಿಗೂ ಇದೇ ಮಾದರಿಯ ಧ್ವನಿ ಮುದ್ರಿತ ಬೆದರಿಕೆ ಕರೆ ಎರಡು ಬಾರಿ ಬಂದಿದೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 12.30ಕ್ಕೆ ಕರೆ ಬಂದಿತ್ತು. ಇದರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಈ ಬಗ್ಗೆ ವಾದ ಮಂಡನೆ ಮಾಡದಂತೆ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ, 1984ರ ಸಿಖ್ ವಿರೋಧಿ ದಂಗೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯ ಕೊಡಿಸಿಲ್ಲ. ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಒಬ್ಬ ಅಪರಾಧಿಯನ್ನೂ ಪತ್ತೆ ಮಾಡಲಾಗದ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ತನಿಖೆ ಮಾಡಬಾರದು ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸೋಮವಾರ, ಪ್ರಧಾನಿಯ ಭದ್ರತಾ ಲೋಪದ ಪ್ರಕರಣದಲ್ಲಿ ತನಿಖೆಗೆ ಪ್ರತ್ಯೇಕ ತಂಡವನ್ನು ನೇಮಕ ಮಾಡಿದೆ. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಚಂಡೀಗಢ ಡಿಜಿಪಿ, ಎನ್ಐಎ ತನಿಖಾ ದಳದ ಐಜಿ ಸೇರಿದಂತೆ ಹಲವು ಪ್ರಮುಖರನ್ನು ಸೇರಿಸಿ ಪ್ರತ್ಯೇಕ ತಂಡ ರಚನೆ ಮಾಡಿದೆ. ಇದಲ್ಲದೆ, ಪಂಜಾಬ್ ಸರಕಾರ ಮತ್ತು ಗೃಹ ಸಚಿವಾಲಯ ನಡೆಸುತ್ತಿರುವ ತನಿಖೆಯನ್ನು ರದ್ದುಪಡಿಸಿದೆ. ಯಾವುದೇ ಪ್ರತ್ಯೇಕ ತನಿಖೆ ಅಗತ್ಯವಿಲ್ಲ. ಇದು ಗಂಭೀರವಾದ ವಿಚಾರವಾಗಿದ್ದು, ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಮುಖ್ಯ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
Even as the Supreme Court agreed to constitute a committee to probe the security breach involving Prime Minister Narendra Modi's convoy on January 5, Times Now has received inputs from at least 15 lawyers, claiming that they received calls from a UK number- reportedly belonging to the banned outfit Sikhs for Justice (SFJ) - taking responsibility for the blockade of the convoy.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm