ಬ್ರೇಕಿಂಗ್ ನ್ಯೂಸ್
10-01-22 11:11 pm HK Desk news ದೇಶ - ವಿದೇಶ
ಪಾಟ್ನಾ, ಜ.9 : ಕಳೆದ ಒಂದು ವರ್ಷದಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲಾಗುತ್ತಿದೆ. ಸರಕಾರ, ಒಬ್ಬರಿಗೆ ಎರಡು ಬಾರಿ ಉಚಿತ ಲಸಿಕೆ ನೀಡುತ್ತಿದೆ. ಆದರೆ, ಇದರ ದುರ್ಲಾಭವನ್ನು ಪಡೆದ ಮುದುಕನೊಬ್ಬ ಒಂದೇ ವರ್ಷದಲ್ಲಿ ಹನ್ನೊಂದು ಬಾರಿ ಲಸಿಕೆ ಪಡೆದು ಹುಬ್ಬೇರಿಸಿದ್ದಾನೆ.
ಬಿಹಾರದ ಮಾದೇಪುರ ಜಿಲ್ಲೆಯ ಬ್ರಹ್ಮದೇವ ಮಂಡಲ ಎಂಬ 84 ವರ್ಷದ ಮುದುಕ ಈ ವಿಚಿತ್ರ ಸಾಧನೆ ಮಾಡಿದವರು. ಮಾಧೇಪುರ ಜಿಲ್ಲೆಯ ಪುರಿಣಿಯ ನಿವಾಸಿ. ಇವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11 ಬಾರಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಪ್ರತಿ ಬಾರಿ ಲಸಿಕೆ ಹಾಕಿದಾಗ ಆರೋಗ್ಯವಾಗಿದ್ದಾರೆ ಎಂದಿದ್ದರು. ತನ್ನ ಆರೋಗ್ಯ ಸರಿ ಇಲ್ಲದಿದ್ದಾಗ ನಕಲಿ ದಾಖಲೆಗಳ ತೋರಿಸಿ ಲಸಿಕೆ ಹಾಕಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿ ಡಾ. ವಿನಯ ಕೃಷ್ಣ ಪ್ರಸಾದ್, ಪುರಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಳೆದ ವರ್ಷ ಫೆಬ್ರವರಿ 13 ರಂದು ಇವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿತ್ತು. ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 13ರಂದು ಎರಡನೇ ಡೋಸ್ ಲಸಿಕೆ ಹಾಕಲಾಗಿತ್ತು. ನಂತರ ಅವರು ಹೊಸ ಆರೋಗ್ಯ ಕೇಂದ್ರವನ್ನು ಆಯ್ಕೆ ಮಾಡಿದ್ದು ಮೇ 19 ರಂದು ಮೂರನೇ ಡೋಸ್ ಪಡೆದಿದ್ದರು. ಆನಂತರ ಜೂನ್ 16, ಜುಲೈ 24, ಆಗಸ್ಟ್ 31, ಸೆಪ್ಟೆಂಬರ್ 11 ಮತ್ತು ಅದೇ ತಿಂಗಳ 22 ಮತ್ತು 24 ರಂದು ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ.
ಜನವರಿ ತಿಂಗಳ ಮೊದಲ ವಾರ 12 ನೇ ಬಾರಿ ಕೋವಿಡ್ ಲಸಿಕೆ ಪಡೆಯಲು ಬಂದಾಗ ಆರೋಗ್ಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು ಪರಿಶೀಲನೆ ನಡೆಸಿದಾಗ ಮುದುಕನ ಅಪರಾವತಾರ ತಿಳಿದುಬಂದಿದೆ.
ಬ್ರಹ್ಮದೇವ್, ಅಂಚೆ ಇಲಾಖೆಯಲ್ಲಿ ಕೆಲಸದಲ್ಲಿದ್ದು ನಿವೃತ್ತನಾಗಿದ್ದು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯದಿಂದಾಗಿ ಈ ರೀತಿ ಲಸಿಕೆ ಪಡೆಯುವಂತಾಗಿತ್ತು. ತನಗೆ ಆರೋಗ್ಯ ತೊಂದರೆ ಇದ್ದುದರಿಂದ ಪದೇ ಪದೇ ಲಸಿಕೆ ಪಡೆದಿದ್ದು ಸ್ವಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ.
84-year-old man, Brahamdev Mandal, a resident of the Puraini area of Madhepura district in Bihar who claims to have taken 11 doses of the coronavirus vaccine has been booked by Bihar Police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am