ಬ್ರೇಕಿಂಗ್ ನ್ಯೂಸ್
11-01-22 09:55 pm HK Desk news ದೇಶ - ವಿದೇಶ
ಲಕ್ನೋ, ಜ.11 : ಉತ್ತರ ಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಸರಕಾರದಲ್ಲಿ ಹಿಂದುಳಿದ ವರ್ಗದ ಸಚಿವರೊಬ್ಬರು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾದಲ್ಲಿ ಗುರುತಿಸಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಸಮಾಜವಾದಿ ಪಾರ್ಟಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್, ಸ್ವಾಮಿ ಪ್ರಸಾದ್ ಮೌರ್ಯ ನಡೆಯನ್ನು ಸ್ವಾಗತಿಸಿದ್ದಾರೆ. ಮೌರ್ಯ, ಸದ್ಯದಲ್ಲೇ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಿಜೆಪಿ ಬಿಟ್ಟು ಹೋಗುತ್ತಿದ್ದಾರೆ ಎನ್ನುವುದು ಖಚಿಚವಾಗುತ್ತಿದ್ದಂತೆ ಬಿಜೆಪಿಯಿಂದ ಇತರ ಮೂವರು ಶಾಸಕರು ರಾಜಿನಾಮೆ ನೀಡಿದ್ದಾರೆ. ರೋಶನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗವತಿ ಸಾಗರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದವರು. ಅವರು ಕೂಡ ಸಮಾಜವಾದಿ ಪಾರ್ಟಿ ಸೇರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಶಾಸಕರಾದ ಮಾಧುರಿ ವರ್ಮಾ ಮತ್ತು ರಾಧಾಕೃಷ್ಣ ಶರ್ಮಾ ಬಿಜೆಪಿ ತೊರೆದಿದ್ದು, ಎಸ್ಪಿ ಸೇರ್ಪಡೆಯಾಗಿದ್ದರು. ಇನ್ನೂ ಕೆಲವು ಬಿಜೆಪಿ ಶಾಸಕರು ಪಕ್ಷ ತೊರೆಯಲಿದ್ದಾರೆ ಎನ್ನಲಾಗುತ್ತಿದೆ.
13 ಜನ ಬಿಜೆಪಿ ತೊರೆಯಲಿದ್ದಾರೆ !
ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದಂತೆ ಇತ್ತ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಇನ್ನೂ 13 ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ಚುನಾವಣೆಯಲ್ಲಿ ಇದರ ಫಲಿತಾಂಶ ಕಾಣಲಿದ್ದೇವೆ. ಚುನಾವಣೆಗೂ ಮುನ್ನ ಕೋಮು ಧ್ರುವೀಕರಣಕ್ಕೆ ಯತ್ನ ನಡೆದಿದೆ. ಆದರೆ, ಮತದಾರರು ಇದಕ್ಕೆ ತಕ್ಕ ಬೆಲೆ ನೀಡಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಸಮಾಜವಾದಿ ಜೊತೆ ಸೇರಿ ಎನ್ ಸಿಪಿ ಸ್ಪರ್ಧೆ ಇದಲ್ಲದೆ, ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಾರ್ಟಿ ಮತ್ತು ಇತರ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆ ಎದುರಿಸಲಿದ್ದೇವೆ. ಗೋವಾದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ಜೊತೆ ಮೈತ್ರಿಗೆ ಮಾತುಕತೆ ನಡೆಸಿದ್ದೇವೆ. ನಾವು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ. ಮಣಿಪುರ, ಗೋವಾ, ಉತ್ತರ ಪ್ರದೇಶದಲ್ಲಿ ಎನ್ ಸಿಪಿ ಸ್ಪರ್ಧೆ ಮಾಡಲಿದೆ ಎಂದು ಪವಾರ್ ತಿಳಿಸಿದ್ದಾರೆ.
Uttar Pradesh Minister Swami Prasad Maurya resigned from the state cabinet on Tuesday afternoon and is all set to join the Samajwadi Party. Party’s chief Akhilesh Yadav welcomed the leader to SP and tweeted,”Warm welcome and greetings to the popular leader Shri Swami Prasad Maurya Ji, who fought for social justice and equality and all the other leaders.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am