ಬ್ರೇಕಿಂಗ್ ನ್ಯೂಸ್
14-01-22 09:44 pm HK Desk news ದೇಶ - ವಿದೇಶ
ನವದೆಹಲಿ, ಜ.14 : ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಬಂದು ಕೆಲವೇ ಕ್ಷಣಗಳ ಅಂತರದಲ್ಲಿ ಅವಘಡದಿಂದ ತಪ್ಪಿದ ಘಟನೆ ನಡೆದಿದ್ದು ನೂರಾರು ಜನರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದುಬೈಯಿಂದ ಹೈದರಾಬಾದ್ಗೆ ಒಂದು ಎಮಿರೇಟ್ಸ್ ವಿಮಾನ ಭಾನುವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಇನ್ನೊಂದು ವಿಮಾನ ಕೂಡ ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ ಅಂತರದಲ್ಲಿ ಈ ಎರಡೂ ವಿಮಾನಗಳು ಹಾರಾಟ ನಡೆಸಬೇಕಿತ್ತು.
ಆದರೆ ಎರಡೂ ವಿಮಾನಗಳು ಒಂದೇ ರನ್-ವೇ (30ಆರ್) ನಲ್ಲಿದ್ದವು. ಹೈದರಾಬಾದ್ಗೆ ಹೊರಟಿದ್ದ ವಿಮಾನವು ಟೇಕ್-ಆಫ್ಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ಅದೇ ದಿಕ್ಕಿನಲ್ಲಿ ಭಾರೀ ವೇಗದಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಎಟಿಸಿಯಿಂದ ಟೇಕ್-ಆಫ್ ಮಾಡದಂತೆ ಹೈದರಾಬಾದ್ಗೆ ಹೊರಟಿದ್ದ ವಿಮಾನಕ್ಕೆ ಸೂಚನೆ ಲಭಿಸಿತು. ತಕ್ಷಣ ವಿಮಾನದ ವೇಗ ಕಡಿಮೆಗೊಳಿಸಿ, ಟ್ಯಾಕ್ಸಿವೇ ಎನ್4 ಮೂಲಕ ದೂರ ಸರಿದಿತ್ತು.
ಬೆಂಗಳೂರಿಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ನಂತರ ಮೊದಲು ಟೇಕ್ ಆಫ್ ಮಾಡಿದರೆ ಹೈದರಾಬಾದ್ಗೆ ಹೊರಟ ವಿಮಾನ ಐದು ನಿಮಿಷದ ನಂತರ ನಿರ್ಗಮಿಸಿದೆ. ಈ ಲೋಪ ಸಾಕಷ್ಟು ಚರ್ಚೆಗೀಡಾಗಿದ್ದು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
A massive collision between two India-bound Emirates planes that were scheduled to take off at a difference of five minutes was averted at Dubai airport saving hundreds of lives on Sunday. According to reports, the possible collision started while both flights, taking off from the Dubai airport, came on one runway.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm