ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm