ಬ್ರೇಕಿಂಗ್ ನ್ಯೂಸ್
22-01-22 03:01 pm HK Desk news ದೇಶ - ವಿದೇಶ
ಮುಂಬೈ, ಜ.21 : ಅಪಾರ್ಟ್ಮೆಂಟ್ ಒಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಏಳು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ, 26 ಮಂದಿ ಸುಟ್ಟ ಗಾಯಗೊಂಡಿದ್ದಾರೆ. ಮುಂಬೈನ ಗೊವಾಲಿಯಾ ಟ್ಯಾಂಕ್ ಬಳಿಯ ಗಾಂಧಿ ಹಾಸ್ಪಿಟಲ್ ಮುಂಭಾಗದಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದ್ದು, 18ನೇ ಮಹಡಿಯಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹೊತ್ತಿಕೊಂಡಿದೆ.
20 ಮಹಡಿಗಳ ಕಮಲಾ ಬಿಲ್ಡಿಂಗ್ ಅಪಾರ್ಟ್ಮೆಂಟ್ ಸಮುಚ್ಚಯವಾಗಿದ್ದು, ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. 13 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕೆಲಸದಲ್ಲಿ ನಿರತವಾಗಿದೆ. 18ನೇ ಮಹಡಿಯ 1904 ನಂಬರಿನ ಮನೆಯೊಂದರಲ್ಲಿ ಬೆಂಕಿ ಹತ್ತಿದ್ದು, ಕೂಡಲೇ ಹೊಗೆ ಆವರಿಸಿದೆ. ಕಟ್ಟಡದಲ್ಲಿ ಹೊಗೆ ಆವರಿಸಿದ್ದು, ಕೆಲವು ಮನೆಗಳಲ್ಲಿ ಇನ್ನೂ ಜನರು ಮಲಗಿದಲ್ಲಿಂದ ಎದ್ದಿರಲಿಲ್ಲ. ಹೀಗಾಗಿ ಏಳುವಾಗದಲೇ ಉಸಿರು ಕಟ್ಟುವ ವಾತಾವರಣ ಉಂಟಾಗಿತ್ತು.
ಆರು ಮಂದಿ ಹಿರಿಯ ನಾಗರಿಕರು ಉಸಿರು ಕಟ್ಟಿ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಬೆಂಕಿ ಹತೋಟಿಗೆ ಬಂದಿದ್ದು, ಹೊಗೆ ಇನ್ನೂ ಆವರಿಸಿಕೊಂಡಿದೆ ಎಂದು ಮುಂಬೈ ಮೇಯರ್ ಕಿಶೋರಿ ಪಾಂಡೇಕರ್ ಹೇಳಿದ್ದಾರೆ. 18 ಮತ್ತು 19ನೇ ಮಹಡಿಯಲ್ಲಿ ಬೆಂಕಿ ಹರಡಿತ್ತು. ಕೂಡಲೇ ಅಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಒಂದು ಮಹಡಿಯಲ್ಲಿ ಆರು ಮನೆಗಳಿದ್ದು, ಅಲ್ಲಿನ ಕುಟುಂಬಗಳ ಕೆಲವು ಮಂದಿ ಸಿಕ್ಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಒಬ್ಬರು ತಿಳಿಸಿದ್ದಾರೆ. ಅಪಾರ್ಟ್ಮೆಂಟಿನಲ್ಲಿದ್ದ ಬೆಂಕಿ ನಿರೋಧಕ ಯಂತ್ರಗಳು ಉಪಯೋಗಕ್ಕೆ ಬಾರದೇ ಇದ್ದುದು ಬೆಂಕಿ ಹತ್ತಿಕೊಳ್ಳಲು ಕಾರಣವಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.
Six people were killed and at least 27 injured after a massive fire (Level 3) broke out on the 18th floor of 20-storey Kamla building located opposite Gandhi Hospital at Gowalia Tank in Mumbai Tardeo around 7:30 am on Saturday. The Brihanmumbai Municipal Corporation said that 13 fire engines were rushed to the spot. The injured have been admitted to nearby hospitals.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am