ಬ್ರೇಕಿಂಗ್ ನ್ಯೂಸ್
17-09-20 02:45 pm Dhruthi Anchan - Correspondent ದೇಶ - ವಿದೇಶ
ಉತ್ತರ ಕೊರಿಯಾ, ಸೆಪ್ಟೆಂಬರ್.17 : ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜೊಂಗ್ ಉನ್ ಸಹೋದರಿ ಕಿಮ್ ಯೋ ಜಾಂಗ್ ಇದೀಗ ವಿಚಿತ್ರ ಆದೇಶವೊಂದನ್ನು ಹೊರಡಿಸಿದ್ದಾರೆ.
ಕಿಮ್ ಯೋ ಜಾಂಗ್ ಹೊರಡಿಸಿರುವ ಆದೇಶದಲ್ಲಿ ಇನ್ನು ಮುಂದೆ ಪ್ರೀ ನರ್ಸರಿ ಮಕ್ಕಳು ಕಡ್ಡಾಯವಾಗಿ 90 ನಿಮಿಷಗಳ ಕಾಲ ಸಹೋದರನ ಗುಣಗಾನ ಮಾಡಬೇಕು. ಅಂದರೆ ತನ್ನ ಸಹೋದರ ಇಲ್ಲಿಯವರೆಗೆ ಮಾಡಿರುವ 'ಮಹಾನ್' ಕಾರ್ಯಗಳ ಬಗ್ಗೆ ಕಡ್ಡಾಯವಾಗಿ ಕಲಿಯಬೇಕು. ಕಲಿಕೆಯ ಸಂದರ್ಭದಲ್ಲಿ ಕಿಮ್ ಜೊಂಗ್ ಉನ್ ಮಾಡಿರುವ ಸಾಧನೆಗಳ ಬಗ್ಗೆ ಶ್ಲಾಘನೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಕಿಮ್ ಜೊಂಗ್ ಉನ್ನ ಸಾಧನೆಗಳ ಪಟ್ಟಿಯನ್ನು ಪ್ರೀ ನರ್ಸರಿ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು, ಪ್ರತಿದಿನ ಕನಿಷ್ಠ 90 ನಿಮಿಷ ಮಕ್ಕಳು ಅದರ ಬಗ್ಗೆ ಕಲಿಯಬೇಕಿದೆ. ಉತ್ತರ ಕೊರಿಯಾದ ಬಗ್ಗೆ ನಿಷ್ಠೆ ಮತ್ತು ನಂಬಿಕೆಯನ್ನು ಉಳಿಸಿ ಬೆಳೆಸಿಕೊಳ್ಳಲು ಅಧ್ಯಕ್ಷ ಕಿಮ್ನ ಗುಣಗಾನ, ಅವರ ಶ್ರೇಷ್ಠತೆ ಬಗ್ಗೆ ಮಕ್ಕಳು ಕಲಿಯಬೇಕು ಎನ್ನುವುದು ಸಹೋದರಿ ಕಿಮ್ ಯೋ ಜಾಂಗ್ ಅನಿಸಿಕೆ.
ಇದಕ್ಕಾಗಿಯೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈ ಮೊದಲು ಇದ್ದ ಪಠ್ಯಕ್ರಮದಲ್ಲಿ 30 ನಿಮಿಷ ಕಿಮ್ನ ಗುಣಗಾನ ಮಾಡುವುದು ಕಡ್ಡಾಯವಾಗಿತ್ತು. ಅದನ್ನೀಗ 90 ನಿಮಿಷಕ್ಕೆ ಏರಿಕೆ ಮಾಡಲಾಗಿದೆ.
ಈ ಪಠ್ಯದ ತರಬೇತಿಗಾಗಿ ವಿಶೇಷ ಅಧ್ಯಾಪಕರನ್ನೂ ನೇಮಕ ಮಾಡಿದ್ದು, ಅದಕ್ಕಾಗಿಯೇ ಪ್ರತ್ಯೇಕ ತರಗತಿಯನ್ನೂ ಮೀಸಲು ಇರಿಸಲಾಗಿದೆ. ಇದರ ಅವಧಿ 90 ನಿಮಿಷಗಳಾಗಿದ್ದು, ಅದರಲ್ಲಿ ಮಕ್ಕಳು ಕಿಮ್ ಬಗ್ಗೆ ತಿಳಿದುಕೊಳ್ಳುವುದು ಇನ್ನುಮುಂದೆ ಕಡ್ಡಾಯವಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm