ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am