ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm