ಬ್ರೇಕಿಂಗ್ ನ್ಯೂಸ್
18-09-20 11:19 am Headline Karnataka News Network ದೇಶ - ವಿದೇಶ
ಲಕ್ನೋ, ಸೆಪ್ಟಂಬರ್ 18: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಕುತೂಹಲ ಎದ್ದಿರುವಾಗಲೇ ಅಯೋಧ್ಯೆ ಮಂದಿರ ಪ್ರಕರಣದಲ್ಲಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ದೇಶದ ಗಮನ ಸೆಳೆಯುವ ರೀತಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆ ಕಾಪಾಡುವ ಸಲುವಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಬೇಕೆಂದು ಇಕ್ಬಾಲ್ ಅನ್ಸಾರಿ ಕೋರಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿರುವ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟಂಬರ್ 30ರಂದು ತೀರ್ಪು ನೀಡಲಿದೆ.

"ಸುಪ್ರೀಂಕೋರ್ಟ್ ಅಯೋಧ್ಯೆ ಪ್ರಕರಣವನ್ನು ಬಗೆಹರಿಸಿದೆ. ಇದೀಗ ರಾಮಮಂದಿರ ಹಾಗೂ ಮಸೀದಿಯನ್ನು ಅಯೋಧ್ಯೆಯಲ್ಲೇ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಿಸಲಾಗುತ್ತಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಲವು ಮಂದಿ ಆರೋಪಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಜ್ಯ ಕೊನೆಗೊಳಿಸಿ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅಯೋಧ್ಯೆ ವಿವಾದವನ್ನು ಬಗೆಹರಿಸಿದಂತೆ ದೇಶದ ಹಿತಾಸಕ್ತಿ ದೃಷ್ಟಿಯಿಂದ ಸಿಬಿಐ ನ್ಯಾಯಾಲಯ ಕೂಡ ವ್ಯಾಜ್ಯ ಕೊನೆಗೊಳಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಅನ್ಸಾರಿ ಮನವಿ ಮಾಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm