ಬ್ರೇಕಿಂಗ್ ನ್ಯೂಸ್
18-09-20 11:19 am Headline Karnataka News Network ದೇಶ - ವಿದೇಶ
ಲಕ್ನೋ, ಸೆಪ್ಟಂಬರ್ 18: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಕುತೂಹಲ ಎದ್ದಿರುವಾಗಲೇ ಅಯೋಧ್ಯೆ ಮಂದಿರ ಪ್ರಕರಣದಲ್ಲಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ದೇಶದ ಗಮನ ಸೆಳೆಯುವ ರೀತಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆ ಕಾಪಾಡುವ ಸಲುವಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಬೇಕೆಂದು ಇಕ್ಬಾಲ್ ಅನ್ಸಾರಿ ಕೋರಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿರುವ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟಂಬರ್ 30ರಂದು ತೀರ್ಪು ನೀಡಲಿದೆ.

"ಸುಪ್ರೀಂಕೋರ್ಟ್ ಅಯೋಧ್ಯೆ ಪ್ರಕರಣವನ್ನು ಬಗೆಹರಿಸಿದೆ. ಇದೀಗ ರಾಮಮಂದಿರ ಹಾಗೂ ಮಸೀದಿಯನ್ನು ಅಯೋಧ್ಯೆಯಲ್ಲೇ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಿಸಲಾಗುತ್ತಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಲವು ಮಂದಿ ಆರೋಪಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಜ್ಯ ಕೊನೆಗೊಳಿಸಿ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅಯೋಧ್ಯೆ ವಿವಾದವನ್ನು ಬಗೆಹರಿಸಿದಂತೆ ದೇಶದ ಹಿತಾಸಕ್ತಿ ದೃಷ್ಟಿಯಿಂದ ಸಿಬಿಐ ನ್ಯಾಯಾಲಯ ಕೂಡ ವ್ಯಾಜ್ಯ ಕೊನೆಗೊಳಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಅನ್ಸಾರಿ ಮನವಿ ಮಾಡಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm