ಬ್ರೇಕಿಂಗ್ ನ್ಯೂಸ್
18-09-20 11:19 am Headline Karnataka News Network ದೇಶ - ವಿದೇಶ
ಲಕ್ನೋ, ಸೆಪ್ಟಂಬರ್ 18: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಬಗ್ಗೆ ಕುತೂಹಲ ಎದ್ದಿರುವಾಗಲೇ ಅಯೋಧ್ಯೆ ಮಂದಿರ ಪ್ರಕರಣದಲ್ಲಿ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ದೇಶದ ಗಮನ ಸೆಳೆಯುವ ರೀತಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದ್ದಾರೆ.
ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆ ಕಾಪಾಡುವ ಸಲುವಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಬೇಕೆಂದು ಇಕ್ಬಾಲ್ ಅನ್ಸಾರಿ ಕೋರಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿರುವ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟಂಬರ್ 30ರಂದು ತೀರ್ಪು ನೀಡಲಿದೆ.

"ಸುಪ್ರೀಂಕೋರ್ಟ್ ಅಯೋಧ್ಯೆ ಪ್ರಕರಣವನ್ನು ಬಗೆಹರಿಸಿದೆ. ಇದೀಗ ರಾಮಮಂದಿರ ಹಾಗೂ ಮಸೀದಿಯನ್ನು ಅಯೋಧ್ಯೆಯಲ್ಲೇ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಿಸಲಾಗುತ್ತಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಹಲವು ಮಂದಿ ಆರೋಪಿಗಳು ಮೃತಪಟ್ಟಿದ್ದಾರೆ. ದೇಶದಲ್ಲಿ ಹಿಂದೂ - ಮುಸ್ಲಿಂ ಏಕತೆಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವ್ಯಾಜ್ಯ ಕೊನೆಗೊಳಿಸಿ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ" ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಅಯೋಧ್ಯೆ ವಿವಾದವನ್ನು ಬಗೆಹರಿಸಿದಂತೆ ದೇಶದ ಹಿತಾಸಕ್ತಿ ದೃಷ್ಟಿಯಿಂದ ಸಿಬಿಐ ನ್ಯಾಯಾಲಯ ಕೂಡ ವ್ಯಾಜ್ಯ ಕೊನೆಗೊಳಿಸಿ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಅನ್ಸಾರಿ ಮನವಿ ಮಾಡಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm