ಬ್ರೇಕಿಂಗ್ ನ್ಯೂಸ್
18-09-20 04:16 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಗೂಗಲ್ ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆ್ಯಪ್ ದಿಢೀರ್ ಆಗಿ ಮಾಯವಾಗಿದೆ. ಪ್ಲೇ ಸ್ಟೋರ್ ನಿಂದ ಪೇಟಿಎಂ ತೆಗೆದು ಹಾಕಿದ್ದರ ಬಗ್ಗೆ ಗೂಗಲ್ ಅಧಿಕೃತವಾಗಿ ಯಾವುದೇ ಕಾರಣ ಕೊಟ್ಟಿಲ್ಲ.
ಪೇಟಿಎಂಗೆ ಭಾರತದಲ್ಲಿ ಲಕ್ಷಾಂತರ ಬಳಕೆದಾರರಿದ್ದಾರೆ. ಇದೀಗ ಆ್ಯಪ್ ಅನ್ನು ಗೂಗಲ್ ನಿಂದ ತೆಗೆದು ಹಾಕಿರುವುದು ಮುಂದೆ ನಿಷೇಧಕ್ಕೆ ಒಳಗಾಗಬಹುದೇ ಎನ್ನುವ ಅನುಮಾನ ಮೂಡಿದೆ. ಮೂಲಗಳ ಪ್ರಕಾರ, ಪೇಟಿಎಂ ಆ್ಯಪ್ ಆನ್ ಲೈನ್ ಜೂಜಿನ ಆಟಗಳಿಗೆ ಹೆಚ್ಚು ಬಳಕೆಯಾಗುತ್ತಿದೆ. ಗೂಗಲ್ ನ ಗ್ಯಾಂಬ್ಲಿಂಗ್ ಪಾಲಿಸಿಯನ್ನು ಉಲ್ಲಂಘಿಸಿದ್ದಕ್ಕಾಗಿ ಪೇಟಿಎಂ ಮೇಲೆ ತೂಗುಕತ್ತಿ ವಿಧಿಸಿದೆ ಎನ್ನಲಾಗ್ತಿದೆ.
ಆದರೆ, ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆಧರಿತ ಪೇಟಿಎಂ ಫೊರ್ ಬ್ಯುಸಿನೆಸ್, ಪೇಟಿಎಂ ಫೊರ್ ಮನಿ ಹಾಗು ಪೇಟಿಎಂಗೆ ಸಂಬಂಧಿಸಿದ ಇತರ ಆ್ಯಪ್ ಗಳು ಈಗಲೂ ಲಭ್ಯವಿದೆ. ಇನ್ನು ಆ್ಯಪಲ್ ಆ್ಯಪ್ ಸ್ಟೋರ್ ನಲ್ಲಿ ಸದ್ಯ ಪೇಟಿಎಂ ಲಭ್ಯವಿದೆ.

ಗೂಗಲ್ ಬ್ಲಾಗ್ ಸ್ಪಾಟ್ ನಲ್ಲಿರುವ ಮಾಹಿತಿ ಪ್ರಕಾರ, ಯಾವುದೇ ಆ್ಯಪ್ ಗೂಗಲ್ ನೀತಿಗಳನ್ನು ಉಲ್ಲಂಘಿಸಿದರೆ ಡೆವಲಪರ್ ಗಳಿಗೆ ಮಾಹಿತಿ ನೀಡಿ, ಆ್ಯಪನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕುತ್ತೇವೆ. ಬಳಿಕ ನಿಯಮ ಅನುಸರಿಸಿಕೊಂಡಲ್ಲಿ ಗೂಗಲ್ ಸ್ಟೋರ್ ನಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದಿದೆ. ಆದರೆ ಈ ಹೇಳಿಕೆಯಲ್ಲಿ ಪೇಟಿಎಮ್ ಆ್ಯಪ್ ಬಗ್ಗೆ ಗೂಗಲ್ ಯಾವುದೇ ರೀತಿಯ ಉಲ್ಲೇಖ ಮಾಡಿಲ್ಲ.
ಎರಡು ದಿನಗಳ ಹಿಂದಷ್ಟೇ ಭಾರತದ ಸಂಸತ್ತಿನಲ್ಲಿ ಆನ್ಲೈನ್ ಜೂಜುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಕೇಳಿಬಂದಿತ್ತು. ಆನ್ಲೈನ್ ರಮ್ಮಿಯಂತಹ ಆಟಗಳನ್ನು ನಿಷೇಧಿಸುವಂತೆ ಸಂಸದರು ಒತ್ತಾಯಿಸಿದ್ದರು. ಈ ಜೂಜಾಟಗಳಿಗೆ ಪೇಟಿಎಂ ಬಳಕೆ ಆಗುತ್ತಿದ್ದ ಬಗ್ಗೆ ಮಾಹಿತಿಗಳಿದ್ದವು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm