ಬ್ರೇಕಿಂಗ್ ನ್ಯೂಸ್
17-02-22 11:32 am HK Desk news ದೇಶ - ವಿದೇಶ
ಲಕ್ನೋ, ಫೆ.17 : ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ಬಾವಿ ಕಟ್ಟೆಯ ಬಳಿ ಬುಧವಾರ ರಾತ್ರಿ ಹಳದಿ ಶಾಸ್ತ್ರ ನಡೆಸುತ್ತಿದ್ದಾಗ ಬಾವಿ ಕಟ್ಟೆಯೇ ಕುಸಿದು ಬಿದ್ದು ಮಕ್ಕಳು, ಮಹಿಳೆಯರು ಸೇರಿ 13 ಮಂದಿ ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಾಂಗಿಯ ಎಂಬ ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದೆ. ಸಂಜೆ ವೇಳೆಗೆ ಮಕ್ಕಳು, ಮಹಿಳೆಯರು ಬಾವಿ ಕಟ್ಟೆ ಬಳಿ ಮದುವೆ ಹೆಣ್ಣಿಗೆ ಹಳದಿ ಶಾಸ್ತ್ರ ಕಾರ್ಯದ ಸಂಭ್ರಮದಲ್ಲಿದ್ದರು. ಈ ವೇಳೆ, ಮಹಿಳೆಯರು ಹಿಡಿದುಕೊಂಡಿದ್ದ ಕಬ್ಬಿಣದ ರಾಟೆ ಮುರಿದು ಬಾವಿಯೊಳಗೆ ಕುಸಿದು ಬಿದ್ದಿದೆ. ಜೊತೆಗೆ ಆವರಣ ಗೋಡೆ ಮತ್ತು ಕಟ್ಟೆಯೂ ಕುಸಿದಿದ್ದು, 30ಕ್ಕೂ ಹೆಚ್ಚು ಮಂದಿ ಬಾವಿಯ ಒಳಗೆ ಬಿದ್ದಿದ್ದಾರೆ.

ಕೂಡಲೇ ಕಾರ್ಯಾಚರಣೆ ನಡೆಸಲಾಗಿದ್ದು, 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೂರು ಮಕ್ಕಳು ಸೇರಿ 13 ಮಂದಿಯನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಶೋಕ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ, ಸೌಲಭ್ಯ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

ಉತ್ತರ ಭಾರತದಲ್ಲಿ ಅರಿಶಿಣ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಬಾವಿ ಕಟ್ಟೆ ಬಳಿ ನಡೆಸುತ್ತಾರೆ. ಈ ವೇಳೆ, ಬಾವಿ ಕಟ್ಟೆಯ ಕುಸಿದು ಬಿದ್ದು ರಾತ್ರಿ ವೇಳೆ ದುರಂತ ನಡೆದಿದೆ ಎನ್ನಲಾಗುತ್ತಿದೆ.
As many as 13 people lost their lives after falling into a well during wedding celebrations in the Nebua Naurangia area of the Kushinagar district of Uttar Pradesh. The District Magistrate of Kushinagar, S Rajalingam told reporters, "We have got to know that 13 people have died and two others have been seriously injured after they accidentally fell into a well. This happened during a wedding program wherein some people were sitting on a slab of a well and due to heavy load, the slab broke."
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm