ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm