ಬ್ರೇಕಿಂಗ್ ನ್ಯೂಸ್
24-02-22 03:57 pm HK Desk news ದೇಶ - ವಿದೇಶ
ನವದೆಹಲಿ, ಫೆ 24 : ಉಕ್ರೇನ್- ರಷ್ಯಾ ಉದ್ವಿಗ್ನತೆ ಕಾರಣದಿಂದಾಗಿ ವಿವಿಧ ರಾಷ್ಟ್ರಗಳ ಆರ್ಥಿಕತೆಯ ಮೇಲೆಯೂ ಪರಿಣಾಮ ಉಂಟಾಗಿದ್ದು, ಷೇರುಪೇಟೆಗಳು ತೀವ್ರ ಕುಸಿತ ಕಂಡಿವೆ. ಭಾರತದ ಮೇಲೆಯೂ ಕೂಡಾ ರಷ್ಯಾ-ಉಕ್ರೇನ್ ಉದ್ವಿಗ್ನತೆ ವಿಚಾರ ಪರಿಣಾಮ ಬೀರಿದೆ. ಬಿಎಸ್ಇ ಪಟ್ಟಿಯ ಕಂಪನಿಯ ಹೂಡಿಕೆದಾರರ ಸಂಪತ್ತು ಕೇವಲ ಒಂದು ಗಂಟೆ ಅವಧಿಯಲ್ಲಿ 8 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಕುಸಿದಿದೆ.
ವಿವಿಧ ಕಂಪನಿಗಳ ಮೇಲೆ ಹೂಡಿಕೆ ಮಾಡುವ ಹೂಡಿಕೆಯದಾರರೂ ರಷ್ಯಾ-ಉಕ್ರೇನ್ ಪರಿಸ್ಥಿತಿಯಿಂದಾಗಿ ಭಯಭೀತರಾಗಿದ್ದಾರೆ. ಮುಂಬೈ ಷೇರುಪೇಟೆಯ ಪಟ್ಟಿಯಲ್ಲಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಬೆಳಗ್ಗೆ 10.15ರ ಸುಮಾರಿಗೆ 2,47,46,960.48 ಕೋಟಿ ರೂಪಾಯಿಗೆ ಕುಸಿದಿದೆ. ಮಾರುಕಟ್ಟೆ ಬಂಡವಾಳ ಎಂದರೆ ಒಂದು ಕಂಪನಿಯ ಒಟ್ಟು ಷೇರುಗಳ ಮೌಲ್ಯವಾಗಿದೆ. ಈ ಷೇರುಗಳ ಮೌಲ್ಯ 2,47,46,960.48 ಕೋಟಿ ರೂಪಾಯಿಗೆ ಕುಸಿದಿದೆ.
ಬುಧವಾರದ ಮುಂಬೈ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಕ್ತಾಯವಾದಾಗ ವಹಿವಾಟಿನ ಮುಕ್ತಾಯಕ್ಕೆ ಮಾರುಕಟ್ಟೆ ಬಂಡವಾಳವು 2,55,68,668.33 ಕೋಟಿ ರೂಪಾಯಿ ಇತ್ತು. ಈಗ 8.2 ಲಕ್ಷ ಕೋಟಿ ರೂಪಾಯಿ ಕುಸಿತವನ್ನು ಕಂಡಿದೆ.

ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ ನಂತರ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿಯೂ ಭಾರಿ ಏರಿಳಿತ ಸಂಭವಿಸಿತ್ತು. ಇದರೊಂದಿಗೆ ದೇಶದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ ಮುಂಜಾನೆ ಶೇಕಡಾ 3ಕ್ಕಿಂತ ಹೆಚ್ಚು ಕುಸಿತ ಕಂಡಿವೆ.
ಬಿಎಸ್ಇ ಸೆನ್ಸೆಕ್ಸ್ 1,718.99 ಪಾಯಿಂಟ್ಗಳು ಅಥವಾ ಶೇಕಡಾ 3ರಷ್ಟು ಕುಸಿದು 55,513.07 ಪಾಯಿಂಟ್ಗಳಿಗೆ ಇಳಿಕೆ ಕಂಡಿದೆ. ನಿಫ್ಟಿ 508.85 ಪಾಯಿಂಟ್ ಅಥವಾ ಶೇಕಡಾ 2.98ರಷ್ಟು ಕುಸಿದು 16,554.40 ಅಂಕಗಳಿಗೆ ತಲುಪಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದಾರೆ. ರಷ್ಯಾದ ನಾಗರಿಕರನ್ನು ಈ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸುತ್ತಿರುವುದಾಗಿ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಾಂತವಾಗುವವರೆಗೆ ಕೆಲವು ರಾಷ್ಟ್ರಗಳ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಇದರೊಂದಿಗೆ ಅಮೆರಿಕ ಮಿತ್ರ ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ಹೇರಿರುವ ಕಾರಣದಿಂದಾಗಿ ಆರ್ಥಿಕತೆಗೆ ಮತ್ತಷ್ಟು ಹೊಡೆತ ಬೀಳಲಿದೆ.
The share market tumbled three per cent on Thursday as investors dumped risky assets after Russian troops fired missiles at several Ukrainian cities which Kiev said was a full-scale invasion, sending oil prices higher and stoking inflation worries.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am