ಬ್ರೇಕಿಂಗ್ ನ್ಯೂಸ್
21-09-20 11:28 am Headline Karnataka News Network ದೇಶ - ವಿದೇಶ
ಮುಂಬೈ ಸೆಪ್ಟಂಬರ್ 21: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್ಡಿಆರ್ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.
40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.
Join our WhatsApp group for latest news updates
video
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am