ಬ್ರೇಕಿಂಗ್ ನ್ಯೂಸ್
08-03-22 08:05 pm HK news Desk ದೇಶ - ವಿದೇಶ
ನವದೆಹಲಿ, ಮಾ.8 : 1999ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಭಾರತದಲ್ಲಿ ಬಂಧಿಯಾಗಿದ್ದ ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿಕೊಂಡಿದ್ದ ಜೈಶ್ ಉಗ್ರರ ಪೈಕಿ ಒಬ್ಬನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್ ಜಾಹಿದ್ ಅಖುಂಡ್ ಎಂಬಾತನನ್ನು ಪಾಕಿಸ್ತಾನದ ಕರಾಚಿಯಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದಾರೆ.
ಜಹೂರ್ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಜೊತೆ ಗುರುತಿಸಿಕೊಂಡಿದ್ದ. ಇಬ್ಬರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ.

1999ರಲ್ಲಿ ಐಸಿ-814 ವಿಮಾನದಲ್ಲಿದ್ದ 176 ಪ್ರಯಾಣಿಕರನ್ನು ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣಕ್ಕೆ ಒಯ್ದಿದ್ದ ಅಪಹರಣಕಾರರು ಏಳು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿದ್ದರು. ವಿಮಾನವು ಕಾಠ್ಮಂಡುವಿನಿಂದ ಹೊರಟು ದೆಹಲಿಗೆ ಬರುತ್ತಿದ್ದಾಗ ಉಗ್ರರು ನುಸುಳಿಕೊಂಡು ಅಪಹರಿಸಿದ್ದು ನೇರವಾಗಿ ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು.
ಭಾರತದ ಜೈಲಿನಲ್ಲಿ ಬಂಧಿಯಾಗಿದ್ದ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಅಲ್ ಉಮರ್ ಮುಜಾಹಿದ್ದೀನ್, ಮುಷ್ತಾಕ್ ಅಹ್ಮದ್ ಜರ್ಗರ್ ಮತ್ತು ಬ್ರಿಟಿಷ್ ಮೂಲದ ಅಲ್-ಖೈದಾ ನಾಯಕ ಅಹ್ಮದ್ ಒಮರ್ ಸಯೀದ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು ಅಪಹರಣ ಮಾಡಲಾಗಿತ್ತು. ಬಳಿಕ ಉಗ್ರರನ್ನು ಬಿಡುಗಡೆಗೊಳಿಸಿ ಅಮಾಯಕ ಜನರನ್ನು ಮರಳಿ ಅದೇ ವಿಮಾನದಲ್ಲಿ ಕರೆತರಲಾಗಿತ್ತು.
zahoor mistry alias zahid akund, one of the terrorists who hijacked air india flight ic-814 in 1999, was shot dead by two bike-riding men in karachi, pakistan.zahoor identified with the terrorist group jaish-e-mohammad. two attackers opened fire and were caught on cctv camera. the identity was not ascertained as he was wearing a mask on his face.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm