ಬ್ರೇಕಿಂಗ್ ನ್ಯೂಸ್
08-03-22 08:05 pm HK news Desk ದೇಶ - ವಿದೇಶ
ನವದೆಹಲಿ, ಮಾ.8 : 1999ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಭಾರತದಲ್ಲಿ ಬಂಧಿಯಾಗಿದ್ದ ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿಕೊಂಡಿದ್ದ ಜೈಶ್ ಉಗ್ರರ ಪೈಕಿ ಒಬ್ಬನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್ ಜಾಹಿದ್ ಅಖುಂಡ್ ಎಂಬಾತನನ್ನು ಪಾಕಿಸ್ತಾನದ ಕರಾಚಿಯಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದಾರೆ.
ಜಹೂರ್ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಜೊತೆ ಗುರುತಿಸಿಕೊಂಡಿದ್ದ. ಇಬ್ಬರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಗುರುತು ಪತ್ತೆಯಾಗಿಲ್ಲ.

1999ರಲ್ಲಿ ಐಸಿ-814 ವಿಮಾನದಲ್ಲಿದ್ದ 176 ಪ್ರಯಾಣಿಕರನ್ನು ಅಫ್ಘಾನಿಸ್ತಾನದ ಕಂದಹಾರ್ ವಿಮಾನ ನಿಲ್ದಾಣಕ್ಕೆ ಒಯ್ದಿದ್ದ ಅಪಹರಣಕಾರರು ಏಳು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿದ್ದರು. ವಿಮಾನವು ಕಾಠ್ಮಂಡುವಿನಿಂದ ಹೊರಟು ದೆಹಲಿಗೆ ಬರುತ್ತಿದ್ದಾಗ ಉಗ್ರರು ನುಸುಳಿಕೊಂಡು ಅಪಹರಿಸಿದ್ದು ನೇರವಾಗಿ ಅಫ್ಘಾನಿಸ್ತಾನದ ಕಂದಹಾರ್ ಗೆ ಕೊಂಡೊಯ್ದಿದ್ದರು.
ಭಾರತದ ಜೈಲಿನಲ್ಲಿ ಬಂಧಿಯಾಗಿದ್ದ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್, ಅಲ್ ಉಮರ್ ಮುಜಾಹಿದ್ದೀನ್, ಮುಷ್ತಾಕ್ ಅಹ್ಮದ್ ಜರ್ಗರ್ ಮತ್ತು ಬ್ರಿಟಿಷ್ ಮೂಲದ ಅಲ್-ಖೈದಾ ನಾಯಕ ಅಹ್ಮದ್ ಒಮರ್ ಸಯೀದ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು ಅಪಹರಣ ಮಾಡಲಾಗಿತ್ತು. ಬಳಿಕ ಉಗ್ರರನ್ನು ಬಿಡುಗಡೆಗೊಳಿಸಿ ಅಮಾಯಕ ಜನರನ್ನು ಮರಳಿ ಅದೇ ವಿಮಾನದಲ್ಲಿ ಕರೆತರಲಾಗಿತ್ತು.
zahoor mistry alias zahid akund, one of the terrorists who hijacked air india flight ic-814 in 1999, was shot dead by two bike-riding men in karachi, pakistan.zahoor identified with the terrorist group jaish-e-mohammad. two attackers opened fire and were caught on cctv camera. the identity was not ascertained as he was wearing a mask on his face.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm