ಬ್ರೇಕಿಂಗ್ ನ್ಯೂಸ್
10-03-22 01:20 pm HK Desk news ದೇಶ - ವಿದೇಶ
ಕೀವ್, ಮಾ 10: ಉಕ್ರೇನ್ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ ನಡಸಿರುವ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದು, ತೀವ್ರ ಖಂಡನ ವ್ಯಕ್ತಪಡಿಸಿದ್ದಾರೆ.
ಇದು ದೌರ್ಜನ್ಯ. ಈ ಜಗತ್ತು ಇನ್ನೆಷ್ಟು ದಿನ ಇಂಥ ಭಯೋತ್ಪಾದನೆಯನ್ನು ನಿರ್ಲಕ್ಷಿಸುತ್ತದೆ? ಈ ಆಕಾಶವೇ ಮುಚ್ಚಿ, ಇಂಥ ದಾಳಿಗಳು ನಿಲ್ಲಬಾರದೆ? ನಿಮಗೆ ಶಕ್ತಿ ಇರಬಹುದು ಆದರೆ ಮಾನವೀಯತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಿ ಎಂದು ಬರೆದುಕೊಂಡಿದ್ದಾರೆ.
ಝೆಲೆನ್ಸ್ಕಿ ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ, ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿರುವುದು ಕಂಡು ಬಂದಿದೆ.
ಆಸ್ಪತ್ರೆಯ ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದು, ಯಾವುದೆ ಸಾವಿನ ವರದಿಯಾಗಿಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಮಕ್ಕಳಿಗೆ ಯಾರಿಗೂ ಗಾಯವಾಗಿಲ್ಲ. ಆದರೆ ಈ ಆಸ್ಪತ್ರೆ ಇನ್ನು ರಿಪೇರಿ ಮಾಡಲಾಗದಷ್ಟು ಧ್ವಂಸಗೊಂಡಿದೆ ಎಂದು ಹೇಳಲಾಗುತ್ತಿದೆ.
ಮರಿಯುಪೋಲ್ ಸಿಟಿಯನ್ನು ರಷ್ಯಾ ಸೇನೆ ಮುತ್ತಿಗೆ ಹಾಕಿದೆ. ಇದು ಆಗ್ನೇಯ ಉಕ್ರೇನ್ನಲ್ಲಿರುವ ಅಜೋವ್ ಸಮುದ್ರದ ದಡದಲ್ಲಿರುವ ಒಂದು ಬಂದರು ನಗರ. ಇಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದರೂ ಕೂಡ, ಆಗಾಗ ಅದನ್ನು ಉಲ್ಲಂಘನೆ ಮಾಡಿ ಬಾಂಬ್ ದಾಳಿ ನಡೆಸುತ್ತಲೇ ಇದೆ.
A Russian airstrike devastated a maternity hospital Wednesday in the besieged port city of Mariupol amid growing warnings from the West that Moscow’s invasion is about to take a more brutal and indiscriminate turn. Ukrainian officials said the attack wounded at least 17 people.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm