ಬ್ರೇಕಿಂಗ್ ನ್ಯೂಸ್
11-03-22 03:15 pm HK Desk news ದೇಶ - ವಿದೇಶ
ಲಕ್ನೋ, ಮಾ.11 : ಉತ್ತರ ಪ್ರದೇಶ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗಳಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಈ ಫಲಿತಾಂಶದಿಂದ ಕಾರ್ಯಕರ್ತರು ಕುಗ್ಗುವುದು ಬೇಡ. ನಾವು ಮುಂದಿನ ದಿನಗಳಲ್ಲಿ ಮತ್ತೆ ತಿರುಗಿ ಬೀಳಲಿದ್ದೇವೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿರುವ ಮಾಯಾವತಿ, ನಾವು ನಿರೀಕ್ಷೆ ಮಾಡದ ರೀತಿ ಫಲಿತಾಂಶ ಬಂದಿದೆ. ಹಾಗೆಂದು ನಾವು ಇದರಿಂದ ಧೃತಿಗೆಡಬಾರದು. ನಾವು ಈ ಫಲಿತಾಂಶದಿಂದ ಪಾಠ ಕಲಿಯಬೇಕು. ಫಲಿತಾಂಶವನ್ನು ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆಗೆ ಮತ್ತಷ್ಟು ಪ್ರಯತ್ನ ಪಡಬೇಕು. ಮುಂದೆ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಪಕ್ಷವು ಕಠಿಣ ದಿನಗಳನ್ನು ಎದುರಿಸುತ್ತಿದೆ. ಹಿಂದೆ ಬಿಜೆಪಿ ಕೂಡ ಕಠಿಣ ಪರಿಸ್ಥಿತಿಯಲ್ಲೇ ಇತ್ತು. ಆದರೆ ಹಂತ ಹಂತವಾಗಿ ಮೇಲೆದ್ದು ಬಂದಿದೆ. 2017ರ ಮೊದಲು ಬಿಜೆಪಿಗೂ ಉತ್ತಮ ಸ್ಥಿತಿ ಇರಲಿಲ್ಲ. ಬಿಜೆಪಿಗೆ ಆಗ ಯಾವ ಸ್ಥಿತಿಯಿತ್ತೋ ಅದೇ ಸ್ಥಿತಿ ಈಗ ಕಾಂಗ್ರೆಸಿನದ್ದಾಗಿದೆ. ಉತ್ತರ ಪ್ರದೇಶದ ಫಲಿತಾಂಶ ನಮಗೆಲ್ಲ ಪಾಠ ಆಗಬೇಕು. ಹೇಗೆ ಸವಾಲನ್ನು ಸ್ವೀಕರಿಸಿ ಮುಂದೆ ಬರಬೇಕು ಅನ್ನುವುದನ್ನು ಕಲಿಯಬೇಕು ಎಂದು ಮಾಯಾವತಿ ಸಲಹೆ ಮಾಡಿದ್ದಾರೆ.
ನಮ್ಮ ಬಗ್ಗೆ ವಿರೋಧ ಪಕ್ಷಗಳು ನೆಗೆಟಿವ್ ಕ್ಯಾಂಪೇನ್ ಮಾಡಿದ್ದು ಮುಳುವಾಯ್ತು ಎಂದು ಹೇಳಿದ ಮಾಯಾವತಿ, ಬಿಎಸ್ಪಿ ಎಂದರೆ ಬಿಜೆಪಿಯ ಬೀ ಟೀಮ್ ಎಂದು ಅಪಪ್ರಚಾರ ನಡೆಸಿದರು. ಆದರೆ ಸತ್ಯ ತದ್ವಿರುದ್ಧವಾಗಿತ್ತು. ಬಿಜೆಪಿ ಮತ್ತು ಬಿಎಸ್ಪಿ ನಡುವಿನ ಹೋರಾಟ ಕೇವಲ ರಾಜಕೀಯವಾಗಿ ಮಾತ್ರ ಅಲ್ಲ. ಸೈದ್ಧಾಂತಿಕವಾಗಿ ಅಷ್ಟೇ ಮುಖ್ಯ. ಜನರು ಬಿಎಸ್ಪಿಯನ್ನು ದೂರವಿಡಲು ಬಿಜೆಪಿ ಮತ ಕೊಟ್ಟಿದ್ದಾರೆ. ಬಿಎಸ್ಪಿ ಪಕ್ಷದ ಬಗ್ಗೆ ವಿರೋಧದಿಂದಾಗಿ ಬಿಜೆಪಿಗೆ ಓಟು ಕೊಟ್ಟಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಮತ ನೀಡಿದ್ದಾರೆ. ಆದರೆ ರಾಜಕಾರಣದಲ್ಲಿ ಸೋಲು- ಗೆಲುವು ಸಹಜ. ಪಕ್ಷದ ನಾಯಕರು ಸಂದರ್ಭಕ್ಕೆ ತಕ್ಕಂತೆ ಒಗ್ಗಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಬೇಕಿದೆ ಎಂದು ಮಾಯಾವತಿ ಹೇಳಿದ್ದಾರೆ.
The Bahujan Samaj Party managed to win only one of the 403 assembly seats in Uttar Pradesh. Following the party’s dismal performance in the UP polls, BSP chief Mayawati urged party workers to not feel discouraged and promised a comeback in the future.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm