ಬ್ರೇಕಿಂಗ್ ನ್ಯೂಸ್
11-03-22 10:41 pm HK Desk news ದೇಶ - ವಿದೇಶ
ನವದೆಹಲಿ, ಮಾರ್ಚ್ 11: ಉಕ್ರೇನ್ ದೇಶದ ಮರಿಯೊಪೋಲ್ನಲ್ಲಿ ಇತ್ತೀಚೆಗೆ ಕದನ ವಿರಾಮ ಘೋಷಿಸಿ ನಾಗರಿಕರ ಸ್ಥಳಾಂತರಕ್ಕೆ ರಷ್ಯಾ ಅವಕಾಶ ಮಾಡಿತ್ತು. ಆದರೆ, ಅಲ್ಲೀಗ ಸಿಕ್ಕಿಬಿದ್ದಿರುವ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಪ್ರತಿ 30 ನಿಮಿಷಕ್ಕೊಮ್ಮೆ ರಷ್ಯಾವು ಆ ಭಾಗದಲ್ಲಿ ದಾಳಿ ನಡೆಸುತ್ತಿದ್ದು ಅಲ್ಲಿಂದ ಜನರನ್ನು ಸ್ಥಳಾಂತರ ಮಾಡಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದೆ.
ಮಾರಿಯೊಪೋಲ್ನಲ್ಲಿ ಸುಮಾರು 4,00000 ಜನರು ಉಳಿದುಕೊಂಡಿದ್ದಾರೆ. ಅಲ್ಲಿನ ಮೇಯರ್ ವಾಡಿಮ್ ಬಾಯ್ಚೆಂಕೊ ರಷ್ಯಾದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಷ್ಯಾ ಪಡೆಗಳು ನಿರ್ದಯಿಯಾಗಿ ದಾಳಿ ನಡೆಸುತ್ತಿವೆ. ಅಪಾರ್ಟ್ಮೆಂಟ್ ಕಟ್ಟಡಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು ಜನರು ಕಂಗೆಡುವಂತಾಗಿದೆ ಎಂದು ಹೇಳಿದ್ದಾರೆ.
ಪ್ರತಿ 30 ನಿಮಿಷಗಳಿಗೊಮ್ಮೆ ರಷ್ಯಾ ವಿಮಾನಗಳು ಮಾರಿಯೊಪೋಲ್ ನಗರದ ಮೇಲೆ ಬರುತ್ತಿದ್ದು ವಸತಿ ಪ್ರದೇಶಗಳನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುತ್ತಿದೆ, ನಾಗರಿಕರನ್ನು ಕೊಲ್ಲುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ಎಲ್ಲರನ್ನೂ ಕೊಲ್ಲುತ್ತಿದೆ ಎಂದು ಮಾರಿಯುಪೋಲ್ನ ಮೇಯರ್ ವಾಡಿಮ್ ಬಾಯ್ಚೆಂಕೊ ಟ್ವೀಟ್ ಪೋಸ್ಟ್ನಲ್ಲಿ ಹೇಳಿದ್ದಾರೆ.

ರಷ್ಯಾ ಶೆಲ್ ದಾಳಿಯಿಂದಾಗಿ ಗುರುವಾರ ಒಬ್ಬ ನಾಗರಿಕನಿಗೂ ಅಲ್ಲಿಂದ ಹೊರಬರಲು ಸಾಧ್ಯವಾಗಲಿಲ್ಲ. ಮೇಯರ್ಗೆ ಸಲಹೆಗಾರರಾದ ಪೆಟ್ರೋ ಆಂಡ್ರುಶೆಂಕೊ ಈ ಬಗ್ಗೆ ಮಾಹಿತಿ ನೀಡಿದ್ದು, 'ರಷ್ಯನ್ನರು ನಮ್ಮ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಬಯಸಿದ್ದಾರೆ. ಜನರ ಸ್ಥಳಾಂತರ ಪ್ರಕ್ರಿಯೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಉಕ್ರೇನ್ನಲ್ಲಿ ಬಂದರು ನಗರಿ ಮಾರಿಯುಪೋಲ್ ಪ್ರಮುಖ ಪ್ರದೇಶ. ಇದನ್ನು ವಶಕ್ಕೆ ಪಡೆದರೆ ರಷ್ಯಾಕ್ಕೆ ಪೂರ್ವದಲ್ಲಿ ಮಾಸ್ಕೋ ಪರ ಇರುವ ಪ್ರದೇಶಗಳನ್ನು ಮತ್ತು ದಕ್ಷಿಣಕ್ಕೆ ರಷ್ಯಾಕ್ಕೆ ಸೇರಿಸಿದ ಕ್ರೆಮಿಯಾವನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಉಕ್ರೇನ್ ಅಧಿಕಾರಿಗಳ ಪ್ರಕಾರ ರಷ್ಯಾದ ದಾಳಿಯಿಂದ ಈವರೆಗೆ 1,300 ಸಾವು ಆಗಿದೆ. ವಿಶ್ವಸಂಸ್ಥೆಯು ಗುರುವಾರ ಉಕ್ರೇನ್ನಾದ್ಯಂತ 41 ಮಕ್ಕಳು ಸೇರಿದಂತೆ 549 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಸಾವಿನ ನೈಜ ಗಣಿತ ಇನ್ನೂ ಹೆಚ್ಚಿನದಿರುತ್ತದೆ.
Civilians trapped in Ukraine’s Mariupol have gone through “two days of hell”, a local official said on Friday, claiming Russian attacks “every 30 minutes” have scuppered any attempt at evacuations from the besieged port city.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm