ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm