ಬ್ರೇಕಿಂಗ್ ನ್ಯೂಸ್
12-03-22 08:52 pm HK Desk news ದೇಶ - ವಿದೇಶ
ನವದೆಹಲಿ, ಮಾ.12: ಪಂಚ ರಾಜ್ಯಗಳ ಚುನಾವಣೆಯಲ್ಲಿ ಎದುರಾದ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಭಾನುವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮೂವರು ನಾಯಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಭಾನುವಾರದ ಸಭೆಯಲ್ಲಿ ಕಾರ್ಯಕಾರಿ ಮಂಡಳಿಯನ್ನೇ ವಿಸರ್ಜಿಸಲು ನಿರ್ಧರಿಸಲಾಗಿದೆ. ಆನಂತರ ಹೊಸತಾಗಿ ಕಾರ್ಯಕಾರಿ ಸಮಿತಿ ರಚಿಸಲು ಚುನಾವಣೆ ನಡೆಸಲಾಗುತ್ತದೆ. ಇದಲ್ಲದೆ, ಆಯಾ ರಾಜ್ಯಗಳ ಚುನಾವಣೆ ಉಸ್ತುವಾರಿ ಹೊತ್ತಿದ್ದವರು ಪಕ್ಷದ ಸೋಲಿನ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ.
ಭಾನುವಾರ ಸಂಜೆ ನಾಲ್ಕು ಗಂಟೆಗೆ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30 ಗಂಟೆಗೆ ಸೋನಿಯಾ ಗಾಂಧಿ, ಸಂಸದೀಯ ಸಲಹಾ ಸಮಿತಿ ಸಭೆಯನ್ನೂ ಕರೆದಿದ್ದಾರೆ. ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರು ಚಿಂತನೆಗೆ ಶುರು ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ಸಭೆ ಕರೆದು ಚರ್ಚಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಜಿ-23 ಭಿನ್ನಮತೀಯ ನಾಯಕರು ಶುಕ್ರವಾರ ತುರ್ತಾಗಿ ಗುಲಾಂ ನಬಿ ಆಜಾದ್ ಮನೆಯಲ್ಲಿ ಸಭೆ ನಡೆಸಿದ್ದು ಪಕ್ಷದ ಸಂಘಟನಾ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾನುವಾರದ ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಭಿನ್ನರು ಸೇರಿ ಸಭೆ ನಡೆಸಿದ್ದು ಮಹತ್ವ ಮೂಡಿಸಿದೆ. ಕಳೆದ ಬಾರಿ ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಎದುರಾದ ಸೋಲಿನ ಬಳಿಕ ಈ ನಾಯಕರು ಪಕ್ಷದಲ್ಲಿ ಬದಲಾವಣೆ ತರಲು ಸಲಹೆ ನೀಡಿದ್ದರು. ಆದರೆ, ಸೋನಿಯಾ ಗಾಂಧಿ ನೇತೃತ್ವದ ಹೈಕಮಾಂಡ್, ಭಿನ್ನ ನಾಯಕರ ಒತ್ತಡಕ್ಕೆ ಸೊಪ್ಪು ಹಾಕಿರಲಿಲ್ಲ.
ಭಾನುವಾರದ ಸಭೆಯಲ್ಲಿ ಈ ಭಿನ್ನ ರಾಗದ ನಾಯಕರು ಕೂಡ ಪಾಲ್ಗೊಳ್ಳಲಿದ್ದು, ಹೊಸ ಅಧ್ಯಕ್ಷರ ನೇಮಕದ ಬಗ್ಗೆ ವಿಳಂಬ ಧೋರಣೆ ಅನುಸರಿಸದಂತೆ ಆಗ್ರಹ ಮಾಡಲಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಪ್ರಮುಖ ಬದಲಾವಣೆಗೆ ಸಲಹೆ ನೀಡಲಿದ್ದಾರೆ. ಅಸೆಂಬ್ಲಿ ಚುನಾವಣೆಗಳ ಸೋಲಿನ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಒತ್ತಡ ಹೇರಲಿದ್ದಾರೆ ಎನ್ನುವ ಮಾಹಿತಿಗಳು ಇವೆ. ಶುಕ್ರವಾರ ಗುಲಾಂ ನಬಿ ಆಜಾದ್ ಮನೆಯಲ್ಲಿ ನಡೆಸಿದ ಸಭೆಯಲ್ಲಿ ಹಿರಿಯ ನಾಯಕರಾದ ಕಪಿಲ್ ಸಿಬಲ್, ಮನೀಶ್ ತಿವಾರಿ, ಆನಂದ್ ಶರ್ಮಾ, ಅಖಿಲೇಶ್ ಪ್ರಸಾದ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
Congress president Sonia Gandhi will chair a meeting of the Congress Working Committee (CWC) on Sunday to take stock of the poll debacle in the five states. Sources said the CWC will take responsibility for the party’s loss in the poll-bound states, and that dates for fresh elections could be announced soon.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm