ಬ್ರೇಕಿಂಗ್ ನ್ಯೂಸ್
24-03-22 02:00 pm HK Desk news ದೇಶ - ವಿದೇಶ
ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:18 pm
HK News Staffer
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm