ಬ್ರೇಕಿಂಗ್ ನ್ಯೂಸ್
24-03-22 02:00 pm HK Desk news ದೇಶ - ವಿದೇಶ
ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm