ಬ್ರೇಕಿಂಗ್ ನ್ಯೂಸ್
24-03-22 03:48 pm HK Desk news ದೇಶ - ವಿದೇಶ
ನವದೆಹಲಿ, ಮಾ.24 : ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠದ ಮುಂದೆ ಕರ್ನಾಟಕದ ಹಿರಿಯ ವಕೀಲ ದೇವದತ್ತ ಕಾಮತ್ ಅರ್ಜಿದಾರರ ಪರವಾಗಿ ಹಾಜರಾಗಿದ್ದು ತುರ್ತು ವಿಚಾರಣೆ ಮಾಡಬೇಕೆಂಬ ಮನವಿಯನ್ನು ನ್ಯಾಯಪೀಠ ನಿರಾಕರಿಸಿದೆ. ವಾರ್ಷಿಕ ಪರೀಕ್ಷೆ ನಡೆಯುವ ಸಮಯವಾದ್ದರಿಂದ ಹಿಜಾಬ್ ಕುರಿತ ಅರ್ಜಿ ವಿಚಾರಣೆಯನ್ನು ತುರ್ತು ನಡೆಸಬೇಕೆಂದು ವಕೀಲರು ಕೋರಿದ್ದರು.
ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದ್ದಲ್ಲದೆ, ತುರ್ತು ವಿಚಾರಣೆ ನಡೆಸಬೇಕಾದ ಅನಿವಾರ್ಯತೆಯನ್ನು ನಿರಾಕರಿಸಿತು. ಈ ವಿಚಾರವನ್ನು ದೊಡ್ಡದು ಮಾಡಬೇಡಿ, ನೀವು ವಿಚಾರಣೆ ನಡೆಸಲು ಕಾಯಬಹುದು ಎಂದು ನ್ಯಾಯಪೀಠ ಹೇಳಿದೆ.
ಈ ತಿಂಗಳ 28ರಿಂದ ಪರೀಕ್ಷೆ ಆರಂಭವಾಗುತ್ತದೆ, ಹಿಜಾಬ್ ಧರಿಸಿಕೊಂಡು ತರಗತಿಗೆ ಹೋದರೆ ಬಿಡುವುದಿಲ್ಲ. ಇದರಿಂದ ಶೈಕ್ಷಣಿಕ ಸಾಲಿನ ಒಂದು ವರ್ಷ ಹೆಣ್ಣು ಮಕ್ಕಳಿಗೆ ನಷ್ಟವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿರಿಯ ನ್ಯಾಯವಾದಿ ದೇವದತ್ತ ಕಾಮತ್ ಮುಸ್ಲಿಂ ವಿದ್ಯಾರ್ಥಿನಿಯರ ಪರ ಮನವಿ ಮಾಡಿದರು.
ಆದರೆ ವಕೀಲರ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿಲ್ಲ. ಕಳೆದ ಮಾರ್ಚ್ 16ರಂದು ಹೋಳಿ ಹಬ್ಬದ ರಜೆ ಬಳಿಕ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಬಗ್ಗೆ ವಿದ್ಯಾರ್ಥಿನಿ ಪರ ವಕೀಲರು ವಿಶ್ವಾಸದಲ್ಲಿದ್ದರು.
ಮುಸ್ಲಿಂ ವಿದ್ಯಾರ್ಥಿನಿಯರ ಪರ ಅರ್ಜಿ ಸಲ್ಲಿಸಿದ್ದ ಮತ್ತೊಬ್ಬ ಹಿರಿಯ ವಕೀಲ ಸಂಜಯ್ ಹೆಗ್ಡೆ, ಈ ತಿಂಗಳಾಂತ್ಯಕ್ಕೆ ಪರೀಕ್ಷೆಗಳು ಆರಂಭವಾಗುವುದರಿಂದ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಮುಂದೆ ಕೋರಿಕೆ ಇಟ್ಟಿದ್ದರು. ಸಂವಿಧಾನ ವಿಧಿ 25ರಡಿಯಲ್ಲಿ ಇಸ್ಲಾಂ ಧರ್ಮದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ನ ಪೂರ್ಣ ಪೀಠ ತೀರ್ಪು ನೀಡಿದ ನಂತರ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
The Supreme Court on Thursday said that exams have nothing to do with Hijab while hearing the mentioning of a plea seeking urgent hearing on a petition challenging the ban on sporting Hijab in educational institutes.Senior Advocate Devadatt Kamat, appearing for the petitioner mentioned his plea seeking urgent hearing on petitions challenging Karnataka High Court’s order that dismissed petitions against the ban on Hijab in educational institutions.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 07:04 pm
Mangalore Correspondent
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm