ಬ್ರೇಕಿಂಗ್ ನ್ಯೂಸ್
25-03-22 10:42 pm HK Desk news ದೇಶ - ವಿದೇಶ
ಲಕ್ನೋ, ಮಾ.25 : ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಸಿಎಂ ಆಗಿ ದಾಖಲೆ ಬರೆದಿದ್ದಾರೆ.
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ ಒಂದು ಲಕ್ಷಕ್ಕೂ ಹೆಚ್ಚು ಜನರ ಮಧ್ಯೆ ಯೋಗಿ ತನ್ನ ಗಜಗಾತ್ರದ ಸಂಪುಟದೊಂದಿಗೆ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತರಿದ್ದರು.
ಯೋಗಿ ಸಂಪುಟದಲ್ಲಿ ಇಬ್ಬರು ಡಿಸಿಎಂ ಮತ್ತು 16 ಮಂದಿ ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿ ಒಟ್ಟು 52 ಮಂದಿ ಸಚಿವರಾಗಿ ಸೇರ್ಪಡೆ ಆಗಿದ್ದಾರೆ. ಕಳೆದ ಬಾರಿ ಡಿಸಿಎಂ ಆಗಿದ್ದ ಕೇಶವಪ್ರಸಾದ್ ಮೌರ್ಯ ಮತ್ತು ಹಿರಿಯ ನಾಯಕ ಬೃಜೇಶ್ ಪಾಠಕ್ ಡಿಸಿಎಂ ಆಗಿ ಪ್ರಮಾಣ ವಚನ ಪಡೆದಿದ್ದಾರೆ. ಮೋದಿ ಆಪ್ತರೆಂದು ಸ್ಥಾನ ಪಡೆದಿರುವ ಮಾಜಿ ಐಎಎಸ್ ಅಧಿಕಾರಿ ಅರವಿಂದ ಕುಮಾರ್ ಶರ್ಮಾ ಮತ್ತು ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ದಾನಿಷ್ ಆಜಾದ್ ಯೋಗಿ ಸರಕಾರದಲ್ಲಿ ಸಚಿವ ಸ್ಥಾನ ಪಡೆದ ಏಕೈಕ ಮುಸ್ಲಿಂ ವ್ಯಕ್ತಿ.
ಕಳೆದ ಬಾರಿ ಸಚಿವರಾಗಿದ್ದ 22 ಮಂದಿಗೆ ಈ ಬಾರಿಯೂ ಸಚಿವ ಸ್ಥಾನ ನೀಡಲಾಗಿದೆ. ಉಳಿದವರನ್ನು ಕೈಬಿಡಲಾಗಿದ್ದು ಹೊಸಬರಿಗೆ ಸ್ಥಾನ ನೀಡಲಾಗಿದೆ. ಅಖಿಲೇಶ್ ಯಾದವ್ ಮತ್ತು ಮಾಯಾವತಿಗೆ ಆಹ್ವಾನ ಇತ್ತಾದರೂ, ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ.
Yogi Adityanath will take oath as the Chief Minister of Uttar Pradesh on Friday (March 25, 2022). The BJP leaders is all set to script history and take oath as the CM of Uttar Pradesh for a new term in office after completing a full five-year term, a feat none of his predecessors has been able to achieve.Prime Minister Narendra Modi, Union Home Minister Amit Shah, chief ministers of BJP-ruled states and senior BJP leaders are expected to attend the oath-taking ceremony.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm