ಬ್ರೇಕಿಂಗ್ ನ್ಯೂಸ್
22-09-20 05:56 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆಪ್ಟಂಬರ್ 22: ‘ತಾಯಿಯ ಅಂಗಾಂಗಗಳು ಮಾರಾಟಕ್ಕಿವೆ. ಮಕ್ಕಳ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನೂ ಮಾರಾಟ ಮಾಡುತ್ತೇನೆ’ ಹೀಗೆ ಬಡ ತಾಯಿಯೊಬ್ಬಳು ತನ್ನ ಮಕ್ಕಳ ಚಿಕಿತ್ಸೆಗಾಗಿ ಬೋರ್ಡ್ ಹಿಡಿದು ನಿಂತ ಹೃದಯ ಕಲಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.
ಶಾಂತಿ ಎಂಬ ಮಧ್ಯವಯಸ್ಕ ಮಹಿಳೆಯೊಬ್ಬರು ತನ್ನ ಬೆಳೆದು ನಿಂತ ಮಕ್ಕಳ ಜೊತೆ ರಸ್ತೆ ಬದಿಯಲ್ಲಿ ಭಿತ್ತಿಪತ್ರ ಹಿಡಿದು ನಿಂತಿದ್ದರು. ಮಲಪ್ಪುರಂ ಜಿಲ್ಲೆಯ ನಿವಾಸಿಯಾಗಿರುವ ಈ ಮಹಿಳೆ ತನ್ನ ಐವರು ಮಕ್ಕಳೊಂದಿಗೆ ಕೊಚ್ಚಿಯಲ್ಲಿ ನೆಲೆಸಿದ್ದಾರೆ. ಮಕ್ಕಳಿಗೆ ಹುಷಾರಿಲ್ಲ. ಅವರ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನು ಮಾರಲು ನಿರ್ಧರಿಸಿದ್ದಾಗಿ ಎಂದು ಬರೆದಿದ್ದಾರೆ.
ತಂದೆಯಿಲ್ಲದ ಈ ಕುಟುಂಬದ ಹೊಣೆ ಹೊತ್ತಿದ್ದ ಹಿರಿಯ ಮಗ 25 ವರ್ಷದ ರಾಜೇಶ್, ಇತ್ತೀಚೆಗೆ ಅಪಘಾತಕ್ಕೀಡಾಗಿದ್ದು ಮೆದುಳಿನ ಸರ್ಜರಿಗೆ ಒಳಗಾಗಿದ್ದಾನೆ. ಇನ್ನು 2ನೇ ಮಗ ರಂಜಿತ್ ಹೊಟ್ಟೆಯಲ್ಲಿ ಟ್ಯೂಮರ್ ಆಗಿದ್ದು, ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾನೆ. ಇನ್ನು ಮೂರನೇ ಮಗ 21 ವರ್ಷದ ಸಜಿತ್, ಥಿಯೇಟರಲ್ಲಿ ಕೆಲಸ ಮಾಡುತ್ತಿದ್ದು ಕೊರೊನಾದಿಂದಾಗಿ ಕೆಲಸ ಕಳಕೊಂಡಿದ್ದಾನೆ. ಇನ್ನು 11 ವರ್ಷದ ಮಗಳಿದ್ದು ರಸ್ತೆ ಅಪಘಾತದಿಂದಾಗಿ ನರದ ಸರ್ಜರಿಗೆ ಒಳಗಾಗಬೇಕೆಂದು ವೈದ್ಯರು ತಿಳಿಸಿದ್ದಾರೆ. ಇನ್ನೊಂದು ಸಣ್ಣ ಮಗುವಿದ್ದು, ಶಾಲೆಗೆ ಹೋಗುತ್ತಿದೆ. ಹೀಗಾಗಿ ಬದುಕು ಸಾಗಿಸಲು ಸಾಧ್ಯವಾಗದೆ ಈ ಕೆಲಸಕ್ಕೆ ಮುಂದಾಗಿದ್ದಾಗಿ ಶಾಂತಿ ಹೇಳುತ್ತಾರೆ.

ಮಹಿಳೆ ಭಿತ್ತಿಪತ್ರ ಹಿಡಿದು ರಸ್ತೆಯಲ್ಲಿ ನಿಲ್ಲುತ್ತಿದ್ದಂತೆ ಎಚ್ಚತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತ ಮಹಿಳೆಗೆ ಸಹಾಯ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಶಾಂತಿ, ನಾವು ಹಲವು ದಿನಗಳಿಂದ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ಮೋಟರ್ ಡ್ರೈವಿಂಗ್ ಕಲಿಸಲು ಹೋಗುತ್ತಿದೆ. ಕೊರೊನಾದಿಂದಾಗಿ ಕೆಲಸವನ್ನೂ ಕಳಕೊಂಡಿದ್ದೇನೆ. ಸದ್ಯ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗದ ಸ್ಥಿತಿ ಇದೆ. ನನ್ನ ಮೂವರು ಮಕ್ಕಳಿಗೆ ಆರೋಗ್ಯ ತೊಂದರೆಗಳಿದ್ದು, ಕೆಲಸ ಮಾಡಲು ಆಗುತ್ತಿಲ್ಲ. ಈಗಾಗಲೇ 20 ಲಕ್ಷ ರೂ. ನಷ್ಟು ಸಾಲ ಮಾಡಿದ್ದೇನೆ. ನಮಗೆ ಹಣದ ಮೂಲ ಯಾವುದೂ ಇಲ್ಲ. ಹೀಗಾಗಿ ಜೀವನ ಕಷ್ಟವಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.ತನ್ನ ಕಿರಿಯ ಮಗುವನ್ನು ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಪತಿ ಬಿಟ್ಟು ಹೋಗಿದ್ದಾರೆ.
ಮಹಿಳೆ ಬೀದಿಗೆ ಬಂದಿರುವ ವಿಚಾರ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಜಿಲ್ಲಾಡಳಿತ ಕುಟುಂಬವನ್ನು ಆಶ್ರಯ ಮನೆಯೊಂದಕ್ಕೆ ಸ್ಥಳಾಂತರಿಸಿದೆ. ಅಲ್ಲದೆ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm